ಸಂಗ್ರಹ ಚಿತ್ರ 
ದೇಶ

ಮಹಿಳಾ ಕಾರ್ಯಕರ್ತರು ಮೊದಲು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಮಹಿಳೆಯರ ಸಮಸ್ಯೆ ಆಲಿಸಲಿ: ತಸ್ಲೀಮಾ ನಸ್ರಿನ್

ಮಹಿಳಾ ಕಾರ್ಯಕರ್ತೆಯರು ಶಬರಿಮಲೆಗೆ ತೆರಳಲು ಯಾಕಿಷ್ಟು ಉತ್ಸುಕತೆ ತೋರಿದ್ದಾರೆ ನನಗೆ ತಿಳಿಯುತ್ತಿಲ್ಲ, ಆದರೆ ದೇಶದಲ್ಲಿ ಮಹಿಳೆಯರು ಅದಕ್ಕಿಂತಲೂ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೆರವಾಗಲಿ ಎಂದು ಖ್ಯಾತ ಲೇಖಕಿ ಮತ್ತು ಮಹಿಳಾ ಪರ ಚಿಂತಕಿ ತಸ್ಲೀಮಾ ನಸ್ರಿನ್ ಹೇಳಿದ್ದಾರೆ.

ನವದೆಹಲಿ: ಮಹಿಳಾ ಕಾರ್ಯಕರ್ತೆಯರು ಶಬರಿಮಲೆಗೆ ತೆರಳಲು ಯಾಕಿಷ್ಟು ಉತ್ಸುಕತೆ ತೋರಿದ್ದಾರೆ ನನಗೆ ತಿಳಿಯುತ್ತಿಲ್ಲ, ಆದರೆ ದೇಶದಲ್ಲಿ ಮಹಿಳೆಯರು ಅದಕ್ಕಿಂತಲೂ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೆರವಾಗಲಿ ಎಂದು ಖ್ಯಾತ ಲೇಖಕಿ ಮತ್ತು ಮಹಿಳಾ ಪರ ಚಿಂತಕಿ ತಸ್ಲೀಮಾ ನಸ್ರಿನ್ ಹೇಳಿದ್ದಾರೆ.
ಶಬರಿಮಲೆಗೆ ಮಹಿಳೆಯ ಪ್ರವೇಶ ಸಂಬಂಧ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಸ್ಲೀಮಾ, ಮಹಿಳಾ ಕಾರ್ಯಕರ್ತೆಯರು ಶಬರಿಮಲೆಗೆ ತೆರಳಲು ಯಾಕಿಷ್ಟು ಉತ್ಸುಕತೆ ತೋರುತ್ತಿದ್ದಾರೆ ಎಂದು ನನಗೆ ಅರ್ಥವಾಗುತ್ತಿಲ್ಲ. ಶಬರಿಮಲೆಗಿಂತ ಮಿಗಿಲಾಗಿ ಮಹಿಳೆಯರು ತೀರಾ ಗಂಭೀರವಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೃಹ ಹಿಂಸೆ, ಲೈಂಗಿಕ ದೌರ್ಜನ್ಯ, ಧ್ವೇಷದಂತಹ ಸಮಸ್ಯೆಗಳಲ್ಲಿ ಬೇಯುತ್ತಿದ್ದಾರೆ. ಶಿಕ್ಷಣ, ಆರೋಗ್ಯದಿಂದ ವಂಚಿತರಾಗುತ್ತಿದ್ದು, ಸ್ವತಂತ್ರವಾಗಿ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಪುರುಷರಿಗೆ ಸರಿಸಮಾನ ವೇತನ ಸಿಗುತ್ತಿಲ್ಲ. ಇಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಮಹಿಳೆಯರ ಪರ ಹೋರಾಟಗಾರ್ತಿಯರು ತಮ್ಮ ಹೋರಾಟ ಮಾಡಲಿ, ಸಾಧ್ಯವಾದರೆ ಹಳ್ಳಿಗಳಿಗೆ ತೆರಳಿ ಅಲ್ಲಿನ ಮಹಿಳೆಯ ಸಮಸ್ಯೆ ಆಲಿಸಲಿ ಎಂದು ಅವರು ಹೇಳಿದರು.
ಇನ್ನು ನಿನ್ನೆ ಭೂಮಾತಾ ಬ್ರಿಗೇಡ್ ಸಂಘಟನೆ ಸಂಸ್ಥಾಪಕಿ ತೃಪ್ತಿ ದೇಸಾಯಿ ಅವರು ಶಬರಿಮಲೆಗೆ ಆಗಮಿಸಲು ಕೇರಳದ ಕೊಚ್ಚಿಗೆ ಆಗಮಿಸಿದರು. ಆದರೆ ಅಯ್ಯಪ್ಪ ಭಕ್ತರ ಪ್ರತಿಭಟನೆಯಿಂದಾಗಿ ದರ್ಶನ ಪಡೆಯದೇ ವಿಮಾನ ನಿಲ್ದಾಣದಿಂದಲೇ ಪುಣೆಗೆ ವಾಪಸ್ ತೆರಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT