ವಸುಂದರಾ ರಾಜೇ ಮತ್ತು ಮನ್ವೇಂದ್ರ ಸಿಂಗ್ 
ದೇಶ

ರಾಜಸ್ಥಾನ ಚುನಾವಣೆ: ವಸುಂಧರಾ ರಾಜೇ ವಿರುದ್ಧ ಜಸ್ವಂತ್ ಸಿಂಗ್ ಪುತ್ರ ಮನ್ವೇಂದ್ರ ಸಿಂಗ್ ಕಾಂಗ್ರೆಸ್ ಅಭ್ಯರ್ಥಿ

ರಾಜಸ್ಥಾನ ರಾಜ್ಯದಲ್ಲಿ ಹೇಗಾದರೂ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್,...

ಜೈಪುರ: ರಾಜಸ್ಥಾನ ರಾಜ್ಯದಲ್ಲಿ ಹೇಗಾದರೂ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್, ವಸುಂದರಾ ರಾಜೇ ಅವರನ್ನು ಸೋಲಿಸಲು ಭರ್ಜರಿ ರಣತಂತ್ರವನ್ನೇ ರೂಪಿಸಿದೆ. 
ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇ ವಿರುದ್ಧ, ಬಿಜೆಪಿ ಹಿರಿಯ ನಾಯಕ, ವಾಜಪೇಯಿ ಅವಧಿಯಲ್ಲಿ ಪ್ರಬಲವಾಗಿದ್ದ ಜಸ್ವಂತ್ ಸಿಂಗ್ ಅವರ ಪುತ್ರ ಮನ್ವೇಂದ್ರ ಸಿಂಗ್ ಅವರನ್ನು ಕಣಕ್ಕಿಳಿಸಿದೆ. 
ಕಳೆದ ತಿಂಗಳಷ್ಟೇ ಕಾಂಗ್ರೆಸ್'ಗೆ ಸೇರ್ಪಡೆಯಾಗಿದ್ದ ಮನ್ವೇಂದ್ರ ಸಿಂಗ್ ಅವರು ಡಿ.7 ರಂದು ನಡೆಯುವ ಚುನಾವಣೆಗೆ, ಸಿಎಂ ರಾಜೇ ಸ್ಪರ್ಧಿಸಿರುವ ಜಲ್ವಾರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲಿದ್ದಾರೆ. 
ಜಲ್ವಾರ್ ಜಿಲ್ಲೆಯ ಈ ವಿಧಾನಸಭಾ ಕ್ಷೇತ್ರದಲ್ಲಿ 2003ರಿಂದಲೂ ರಾಜೇಯವರು ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಅಳೆದುತೂಗಿ ತಮ್ಮ ಹಳೆಯ ಸಾಧಿ, ಬಿಜೆಪಿಯ ಥಿಂಕ್ ಟ್ಯಾಂಕ್ ಎಂದೇ ಹೇಳಲಾಗುತ್ತಿದ್ದ ಜಸ್ವಂತ್ ಸಿಂಗ್ ಪುತ್ರನನ್ನೇ ಸಿಎಂ ವಿರುದ್ಧ ಕಣಕ್ಕಳಿಸಿದೆ. ಸೆ.22 ರಂದು ಮನ್ವೇಂದ್ರ ಸಿಂಗ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT