ಚಿದಂಬರಂ 
ದೇಶ

ಆರ್ ಬಿಐ ಮೀಸಲು ಹಣದ ಮೇಲೆ ಕೇಂದ್ರ ಸರ್ಕಾರದ ಕಣ್ಣು- ಚಿದಂಬರಂ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿರುವ 9 ಲಕ್ಷ ಕೋಟಿ ರೂಪಾಯಿ ಮೀಸಲು ಹಣದ ಮೇಲೆ ಕೇಂದ್ರಸರ್ಕಾರ ಕಣ್ಣಿಟ್ಟಿದ್ದು, ಆರ್ ಬಿಐಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದಾರೆ.

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿರುವ 9 ಲಕ್ಷ ಕೋಟಿ ರೂಪಾಯಿ ಮೀಸಲು ಹಣದ ಮೇಲೆ  ಕೇಂದ್ರಸರ್ಕಾರ ಕಣ್ಣಿಟ್ಟಿದ್ದು, ಆರ್ ಬಿಐಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ  ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದಾರೆ.

 ಆರ್ ಬಿಐ  ಆಡಳಿತ ಮಂಡಳಿ ಸಭೆ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಜಿ ಹಣಕಾಸು ಸಚಿವರೂ ಆದ ಚಿದಂಬರಂ, ಸೋಮವಾರ ನಡೆಯಲಿರುವ ಸಭೆಯಲ್ಲಿ ಆರ್ ಬಿಐ ಮತ್ತು ಕೇಂದ್ರಸರ್ಕಾರ ಪರಸ್ಪರ ಹೊಡೆದಾಡಿಕೊಳ್ಳಲಿವೆ ಎಂದು ಹೇಳಿದ್ದಾರೆ.

ಆರ್ ಬಿಐ ಸಭೆಯು ಕೇಂದ್ರ ಬ್ಯಾಂಕಿನ ಸ್ವಾಯತ್ತತೆ ಹಾಗೂ ಭಾರತದ ಆರ್ಥಿಕತೆ ನಡುವಣ ಲೆಕ್ಕ ಪರಿಶೋಧನೆ ಮಾಡುವ ದಿನವಾಗಿದೆ. ಇನ್ನು ಮುಂದೆ ಜಗತ್ತಿನಲ್ಲಿ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿ ನಿರ್ವಹಿಸುವ ಕಂಪನಿಯಾಗಲಿದೆ. ಖಾಸಗಿ ಉದ್ಯಮಿಗಳು, ಆರ್ ಬಿಐ ಗೌರ್ನರ್ ಗೆ ನೀಡುವ ಸಲಹೆ ಸೂಚನೆ ನಿರ್ದೇಶನಗಳಂತೆ ನಡೆಯುವ ಸಂಸ್ಥೆಯಾಗಿ ಪರಿವರ್ತನೆಯಾಗಲಿದೆ ಎಂದು ಚಿದಂಬರಂ ವ್ಯಂಗ್ಯವಾಡಿದ್ದಾರೆ.

9.53 ಲಕ್ಷ ಕೋಟಿ ರೂ.ಗಳಷ್ಟು ಮೀಸಲು ಹಣವನ್ನು ಆರ್ ಬಿಐ ಹೊಂದಿದೆ. ಈಗ ಬರುತ್ತಿರುವ ವರದಿಗಳನ್ನೇ ನಂಬುವುದಾದರೆ, ನಿಯಮಾವಳಿಗಳನ್ನು ಸಡಿಲಿಸುವ ಮೂಲಕ ಮೀಸಲು ಹಣದ ಪ್ರಮಾಣ ಕ್ಷೀಣಿಸುವಂತೆ ಮಾಡಿದರೆ  ಕೇಂದ್ರ ಬ್ಯಾಂಕ್ ದುರ್ಬಲವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ ಬಿಐನ 3.6 ಲಕ್ಷ ಕೋಟಿ ರೂ. ಮೀಸಲು ಹಣವನ್ನು  ಕೇಂದ್ರಕ್ಕೆ ನೀಡಬೇಕೆಂಬ ಯಾವುದೇ ಪ್ರಸ್ತಾವನೆ ಇಲ್ಲ. ಅದೆಲ್ಲ ಕೇವಲ ಊಹಾಪೋಹವಷ್ಟೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಈಗಾಗಲೇ ಸ್ಪಷ್ಪಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT