ಚಿದಂಬರಂ 
ದೇಶ

ಆರ್ ಬಿಐ ಮೀಸಲು ಹಣದ ಮೇಲೆ ಕೇಂದ್ರ ಸರ್ಕಾರದ ಕಣ್ಣು- ಚಿದಂಬರಂ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿರುವ 9 ಲಕ್ಷ ಕೋಟಿ ರೂಪಾಯಿ ಮೀಸಲು ಹಣದ ಮೇಲೆ ಕೇಂದ್ರಸರ್ಕಾರ ಕಣ್ಣಿಟ್ಟಿದ್ದು, ಆರ್ ಬಿಐಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದಾರೆ.

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿರುವ 9 ಲಕ್ಷ ಕೋಟಿ ರೂಪಾಯಿ ಮೀಸಲು ಹಣದ ಮೇಲೆ  ಕೇಂದ್ರಸರ್ಕಾರ ಕಣ್ಣಿಟ್ಟಿದ್ದು, ಆರ್ ಬಿಐಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ  ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದಾರೆ.

 ಆರ್ ಬಿಐ  ಆಡಳಿತ ಮಂಡಳಿ ಸಭೆ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಜಿ ಹಣಕಾಸು ಸಚಿವರೂ ಆದ ಚಿದಂಬರಂ, ಸೋಮವಾರ ನಡೆಯಲಿರುವ ಸಭೆಯಲ್ಲಿ ಆರ್ ಬಿಐ ಮತ್ತು ಕೇಂದ್ರಸರ್ಕಾರ ಪರಸ್ಪರ ಹೊಡೆದಾಡಿಕೊಳ್ಳಲಿವೆ ಎಂದು ಹೇಳಿದ್ದಾರೆ.

ಆರ್ ಬಿಐ ಸಭೆಯು ಕೇಂದ್ರ ಬ್ಯಾಂಕಿನ ಸ್ವಾಯತ್ತತೆ ಹಾಗೂ ಭಾರತದ ಆರ್ಥಿಕತೆ ನಡುವಣ ಲೆಕ್ಕ ಪರಿಶೋಧನೆ ಮಾಡುವ ದಿನವಾಗಿದೆ. ಇನ್ನು ಮುಂದೆ ಜಗತ್ತಿನಲ್ಲಿ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿ ನಿರ್ವಹಿಸುವ ಕಂಪನಿಯಾಗಲಿದೆ. ಖಾಸಗಿ ಉದ್ಯಮಿಗಳು, ಆರ್ ಬಿಐ ಗೌರ್ನರ್ ಗೆ ನೀಡುವ ಸಲಹೆ ಸೂಚನೆ ನಿರ್ದೇಶನಗಳಂತೆ ನಡೆಯುವ ಸಂಸ್ಥೆಯಾಗಿ ಪರಿವರ್ತನೆಯಾಗಲಿದೆ ಎಂದು ಚಿದಂಬರಂ ವ್ಯಂಗ್ಯವಾಡಿದ್ದಾರೆ.

9.53 ಲಕ್ಷ ಕೋಟಿ ರೂ.ಗಳಷ್ಟು ಮೀಸಲು ಹಣವನ್ನು ಆರ್ ಬಿಐ ಹೊಂದಿದೆ. ಈಗ ಬರುತ್ತಿರುವ ವರದಿಗಳನ್ನೇ ನಂಬುವುದಾದರೆ, ನಿಯಮಾವಳಿಗಳನ್ನು ಸಡಿಲಿಸುವ ಮೂಲಕ ಮೀಸಲು ಹಣದ ಪ್ರಮಾಣ ಕ್ಷೀಣಿಸುವಂತೆ ಮಾಡಿದರೆ  ಕೇಂದ್ರ ಬ್ಯಾಂಕ್ ದುರ್ಬಲವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ ಬಿಐನ 3.6 ಲಕ್ಷ ಕೋಟಿ ರೂ. ಮೀಸಲು ಹಣವನ್ನು  ಕೇಂದ್ರಕ್ಕೆ ನೀಡಬೇಕೆಂಬ ಯಾವುದೇ ಪ್ರಸ್ತಾವನೆ ಇಲ್ಲ. ಅದೆಲ್ಲ ಕೇವಲ ಊಹಾಪೋಹವಷ್ಟೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಈಗಾಗಲೇ ಸ್ಪಷ್ಪಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!