ಪ್ರಧಾನಿ ನರೇಂದ್ರ ಮೋದಿ 
ದೇಶ

ಸೋನಿಯಾ ದಾರಿ ಸುಗಮಕ್ಕಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಬಲಿ - ಪ್ರಧಾನಿ ಮೋದಿ

ಸೋನಿಯಾಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಸಲುವಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಅಧಿಕಾರ ಪೂರ್ಣಗೊಳಿಸುವ ಮುನ್ನಾವೇ ಅವರನ್ನು ಪಕ್ಷದಿಂದ ಹೊರಗೆ ದಬ್ಬಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ

ಛತ್ತೀಸ್ ಗಢ : ಸೋನಿಯಾಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಸಲುವಾಗಿ ದಲಿತ ನಾಯಕ ಸೀತಾರಾಮ್ ಕೇಸರಿ  ಅಧಿಕಾರ ಪೂರ್ಣಗೊಳಿಸುವ ಮುನ್ನಾವೇ ಅವರನ್ನು ಪಕ್ಷದಿಂದ ಹೊರಗೆ ದಬ್ಬಲಾಯಿತು ಎಂದು ಕಾಂಗ್ರೆಸ್ ಹಾಗೂ ನೆಹರು-ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಛತ್ತೀಸ್ ಗಢ ವಿಧಾನಸಭೆಯ ಎರಡನೇ ಹಾಗೂ ಅಂತಿಮ ಹಂತದ ಚುನಾವಣೆ  ಪ್ರಚಾರದ ಕಡೆಯೇ ದಿನವಾದ ಇಂದು  ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, ಒಂದೇ ಕುಟುಂಬದ ನಾಲ್ಕು ತಲೆಮಾರಿನವರು ದೇಶವನ್ನು ಆಳಿದ್ದಾರೆ. ಅಧಿಕಾರದಿಂದ ಪ್ರಯೋಜನ ಪಡೆದುಕೊಂಡಿದ್ದಾರೆ. ಆದರೆ, ಅವರ ಆಡಳಿತದಿಂದ ದೇಶಕ್ಕೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ದಲಿತ ನಾಯಕ ಸೀತಾರಾಮ್ ಕೇಸರಿ ಐದು ವರ್ಷ ಪೂರ್ಣಗಳೊಳಿಸಲು ಕಾಂಗ್ರೆಸ್ ಬಿಡಲಿಲ್ಲ. ಇದನ್ನು ದೇಶ ನೋಡಿದೆ. ಸೋನಿಯಾಗಾಂಧಿ ಹಾದಿ  ಸುಗಮಗೊಳಿಸಲು ಅವರನ್ನು ಕಚೇರಿಯಿಂದ ಹೊರ ಹಾಕಿ ಬೀದಿಗೆ ತಳ್ಳಲಾಯಿತು ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷರಾಗಲು ಯೋಗ್ಯತೆ ಇರುವ ಗಾಂಧಿ ಕುಟುಂಬಕ್ಕೆ ಸೇರದೆ ಇರುವ ಯಾವುದೇ ನಾಯಕನನ್ನು  ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಿ ಎಂದು ನರೇಂದ್ರ ಮೋದಿ ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪದಗ್ರಹಣಕ್ಕೂ ಮುನ್ನವೇ ಸಿದ್ದರಾಮಯ್ಯಗೆ ಮಹತ್ವದ ಸ್ಥಾನ: ಕಾಂಗ್ರೆಸ್‌ ಪರಮೋಚ್ಚ ಸಮಿತಿಗೆ ನೇಮಕ

DCM ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಶಾಕ್! ಒಬ್ಬರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ; ಯಾರೂ ಆ ಪ್ರಭಾವಿ ನಾಯಕ?

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಸಂಬಂಧಿತ ರಸ್ತೆ ತಡೆ ಪ್ರಕರಣ: 31 ಜನರ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಸಿನಿಮೀಯ ಶೈಲಿಯಲ್ಲಿ ಮಾಜಿ MLC ಕಿಡ್ನ್ಯಾಪ್: 3 ಕೋಟಿ ರೂ ಗೆ ಡಿಮ್ಯಾಂಡ್; ದುಷ್ಟರಿಂದ ದಯಾನಂದ ರೆಡ್ಡಿ ಬಚಾವ್​​ ಆಗಿದ್ದೇ ರೋಚಕ!

ಬಂಗಾಳದಲ್ಲಿ ವಂದೇ ಮಾತರಂ ಕಡ್ಡಾಯ: ಮುಸ್ಲಿಂ ಲಾ ಬೋರ್ಡ್ ತೀವ್ರ ವಿರೋಧ; ಆದೇಶ ಹಿಂಪಡೆಯುವಂತೆ ಆಗ್ರಹ

SCROLL FOR NEXT