ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ 
ದೇಶ

ಪರಿಕ್ಕರ್-ಸೋನಿಯಾ ಅನಾರೋಗ್ಯದ ಜೊತೆಗೆ ಹೋಲಿಕೆ ಬೇಡ: ಕಾಂಗ್ರೆಸ್

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿಯವರ ಆರೋಗ್ಯವನ್ನು ಹೋಲಿಕೆ ಮಾಡಬಾರದು ಎಂದು ಕಾಂಗ್ರೆಸ್ ಹೇಳಿದೆ...

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿಯವರ ಆರೋಗ್ಯವನ್ನು ಹೋಲಿಕೆ ಮಾಡಬಾರದು ಎಂದು ಕಾಂಗ್ರೆಸ್ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಮನೋಹರ್ ಪರಿಕ್ಕರ್ ರಾಜ್ಯದ ಮುಖ್ಯಮಂತ್ರಿ. ಸೋನಿಯಾ ಗಾಂಧಿಯವರು ಅನಾರೋಗ್ಯಕ್ಕೀಡಾದಾಗ ಪ್ರಧಾನಮಂತ್ರಿಯೂ ಆಗಿರಲಿಲ್ಲ, ಸಚಿವರೂ ಆಗಿರಲಿಲ್ಲ. ಹೀಗಾಗಿ ಸೋನಿಯಾ ಆರೋಗ್ಯದ ಜೊತೆಗೆ ಪರಿಕ್ಕರ್ ಆರೋಗ್ಯವನ್ನು ಹೋಲಿಕೆ ಮಾಡಬಾರದು ಎಂದು ಹೇಳಿದ್ದಾರೆ. 
ಅಧಿಕಾರದಲ್ಲಿದ್ದವರು, ಪ್ರಮುಖವಾಗಿ ಒಂದು ರಾಜ್ಯದ ಜವಾಬ್ದಾರಿ ಹೊತ್ತವರು, ಸಾರ್ವಜನಿಕರ ಹಿತಾಸಕ್ತಿಗಳಿಗಾಗಿ ತಮ್ಮ ಆರೋಗ್ಯ ವಿಚಾರ ಕುರಿತ ಮಾಹಿತಿಗಳನ್ನು ಬಹಿರಂಗಪಡಿಸಬೇಕು. ನಾನೂ ಕೂಡ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇನೆ. ನಾನು ರಕ್ತದೊತ್ತಡದಿಂದ ಬಳಲುತ್ತಿದ್ದೇನೆ. 
ಇದಕ್ಕಾಗಿ ನಾನು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಆದರೆ, ಇದನ್ನೂ ಇಂದಿಗೂ ನಾನು ಎಲ್ಲಿಯೂ ಬಹಿರಂಗಪಡಿಸಿರಲಿಲ್ಲ. ಇಂದು ಮಾಧ್ಯಮದವರು ಕೇಳಿದ ಕಾರಣಕ್ಕೆ ಹೇಳಿಕೊಂಡಿದ್ದೇನೆ. ಹಾಗೆಂದು ಪ್ರತೀ ಸಮಸ್ಯೆಯನ್ನು ನಾನು ಬಹಿರಂಗಪಡಿಸಬೇಕೆಂದಲ್ಲ. ನಾನು ಸಾರ್ವಜನಿಕರ ಜೀವನದಲ್ಲಿದ್ದೇನೆ. ಹೀಗಾಗಿ ಬಹಿರಂಗಪಡಿಸಬೇಕು. ಅಧಿಕಾರದಲ್ಲಿದ್ದ ವ್ಯಕ್ತಿ ಕೂಡ ಸಾರ್ವಜನಿಕರಿಗೆ ತಮ್ಮ ಕುರಿತು ಮಾಹಿತಿಗಳನ್ನು ನೀಡುತ್ತಿರಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT