ಚೆನ್ನೈ ಬಂದರಿನಲ್ಲಿ ತೈಲ ಸೋರಿಕೆ 
ದೇಶ

ಚೆನ್ನೈ: ತೈಲ ಪೈಪ್ ಒಡೆದ ಪರಿಣಾಮ ಭಾರಿ ಪ್ರಮಾಣದ ತೈಲ ಸಮುದ್ರ ಪಾಲು!

ಕಳೆದ ವರ್ಷ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಚೆನ್ನೈ ತೈಲ ಸೋರಿಕೆ ಪ್ರಕರಣ ಮತ್ತೆ ನೆನಪಾಗಿದ್ದು, ಚೆನ್ನೈ ಬಂದರಿನ ಉತ್ತರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿ ಆತಂಕ ಮೂಡಿಸಿದೆ.

ಚೆನ್ನೈ: ಕಳೆದ ವರ್ಷ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಚೆನ್ನೈ ತೈಲ ಸೋರಿಕೆ ಪ್ರಕರಣ ಮತ್ತೆ ನೆನಪಾಗಿದ್ದು, ಚೆನ್ನೈ ಬಂದರಿನ ಉತ್ತರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿ ಆತಂಕ ಮೂಡಿಸಿದೆ.
ಚೆನ್ನೈ ಬಂದರಿನ ಉತ್ತರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿದ್ದು, ಸುಮಾರು ಎರಡು ಟನ್ ನಷ್ಟು ಕಚ್ಛಾ ತೈಲ ಸಮುದ್ರದ ಪಾಲಾಗಿದೆ. ಚೆನ್ನೈನಿಂದ ಸುಮಾರು 20 ಕಿಲೋಮೀಟರ್ ದೂರದ ಎನ್ನೋರ್‌ನ ಕಾಮರಾಜರ್ ಬಂದರಿನಲ್ಲಿ ಈ ಘಟನೆ ನಡೆದಿದ್ದು, ತೈಲ ವರ್ಗಾವಣೆಯ ಪೈಪ್ ಒಡೆದ ಹಿನ್ನೆಲೆಯಲ್ಲಿ ಭಾನುವಾರ ಈ ದುರಂತ ಸಂಭವಿಸಿದ್ದು, ಎಂಟಿ ಕೊರಲ್ ಸ್ಟಾರ್ಸ್‌ ಎಂಬ ಟ್ಯಾಂಕರ್‌ ನಿಂದ ಈ ತೈಲ ಸೋರಿಕೆಯಾಗಿದೆ ಎಂದು ಮೂಲಗಳು ಹೇಳಿವೆ.
ಇನ್ನು ಪ್ರಸ್ತುತ ಸಮುದ್ರಪಾಲಾಗಿರುವ ತೈಲ ಸ್ವಚ್ಛಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಸಂಜೆ ವೇಳೆಗೆ ಇದು ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಅಂತೆಯೇ ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಮರ್ಕೆಂಟೈಲ್ ಮೆರೈನ್ ವಿಭಾಗಗಳು ಪರಿಸ್ಥಿತಿಯ ಮೇಲೆ ನಿಗಾ ಇರಿಸಿವೆ. ಭಾನುವಾರ ಟ್ಯಾಂಕರ್ ನಿಂದ ತೈಲವನ್ನು ವರ್ಗಾವಣೆ ಮಾಡುತ್ತಿದ್ದಾಗ ಪೈಪ್ ಒಡೆದು, ತೈಲ ಸೋರಿಕೆಯಾಗಿದೆ ಎಂದು ಬಂದರಿನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪಿ.ರವೀಂದ್ರನ್ ಹೇಳಿದ್ದಾರೆ. ನೀರಿನಲ್ಲಿ ಸೇರಿರುವ ತೈಲ ಸಂಗ್ರಹಿಸಲು ಸ್ಕಿಮ್ಮರ್ ಬಳಸಲಾಗುತ್ತಿದೆ. ಸೋರಿಕೆಯಾದ ತೈಲದಲ್ಲಿ ಶೇಕಡ 80ರಷ್ಟು ಟ್ಯಾಂಕರ್ ನ ಸುತ್ತಲೂ ಇದೆ. ಇನ್ನೂ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಾಲಿ ತೈಲ ಸೋರಿಕೆ ಪ್ರಕರಣ ಕಳೆದ ವರ್ಷದ ಘಟನಾವಳಿಯನ್ನು ನೆನಪಿಸಿತಿದ್ದು, ಎರಡು ಸರಕು ಸಾಗಾಟ ಹಡಗುಗಳು ಪರಸ್ಪರ ಢಿಕ್ಕಿ ಹೊಡೆದು ಇದೇ ಪ್ರದೇಶದಲ್ಲಿ 2017ರ ಜನವರಿಯಲ್ಲಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿತ್ತು. ಅದನ್ನು ಸ್ವಚ್ಛಗೊಳಿಸಲು ಮತ್ತು ಪರಿಸರಕ್ಕೆ ಆದ ಹಾನಿಯನ್ನು ತಡೆಯಲು ಸ್ವಯಂ ಸೇವಕ ಕಾರ್ಯಕರ್ತರು ಹರಸಾಹಸ ಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT