ಪವನ್ ಕಲ್ಯಾಣ್ 
ದೇಶ

ತೆಲಂಗಾಣ ಚುನಾವಣೆಗೆ ಸ್ಪರ್ಧಿಸದಿರಲು ಪವನ್ ಕಲ್ಯಾಣ ಪಕ್ಷ ನಿರ್ಧಾರ, ಲೋಕಸಭೆ ಮೇಲೆ ಕಣ್ಣು

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸುವುದಕ್ಕಾಗಿ ಡಿಸೆಂಬರ್ 7ರಂದು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಗೆ...

ಅಮರಾವತಿ: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸುವುದಕ್ಕಾಗಿ ಡಿಸೆಂಬರ್ 7ರಂದು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ಖ್ಯಾತ ತೆಲುಗು ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಪಕ್ಷ ಜನಸೇನಾ ನಿರ್ಧರಿಸಿದೆ.
ಪಕ್ಷದ ಎಲ್ಲಾ ನಾಯಕರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆ ನಿಗದಿಯಂತೆ 2019ರಲ್ಲಿ ನಡೆದಿದ್ದರೆ ನಾವು ಸ್ಪರ್ಧಿಸುತ್ತಿದ್ದೇವೆ. ಆದರೆ ಅವಧಿಗೂ ಮುನ್ನ ನಡೆಯುತ್ತಿರುವುದರಿಂದ ನಮ್ಮ ಪಕ್ಷ ಸ್ಪರ್ಧೆಗೆ ಸಿದ್ಧವಾಗಿಲ್ಲ. ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಜನಸೇನಾ ಸ್ಪರ್ಧಿಸಲಿದೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ತೆಲಂಗಾಣದಲ್ಲಿ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ಸಹ ಚುನಾವಣೆಯಿಂದ ದೂರ ಉಳಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT