ಪವನ್ ಕಲ್ಯಾಣ್ 
ದೇಶ

ತೆಲಂಗಾಣ ಚುನಾವಣೆಗೆ ಸ್ಪರ್ಧಿಸದಿರಲು ಪವನ್ ಕಲ್ಯಾಣ ಪಕ್ಷ ನಿರ್ಧಾರ, ಲೋಕಸಭೆ ಮೇಲೆ ಕಣ್ಣು

ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸುವುದಕ್ಕಾಗಿ ಡಿಸೆಂಬರ್ 7ರಂದು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಗೆ...

ಅಮರಾವತಿ: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯತ್ತ ಹೆಚ್ಚು ಗಮನಹರಿಸುವುದಕ್ಕಾಗಿ ಡಿಸೆಂಬರ್ 7ರಂದು ನಡೆಯುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ಖ್ಯಾತ ತೆಲುಗು ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಪಕ್ಷ ಜನಸೇನಾ ನಿರ್ಧರಿಸಿದೆ.
ಪಕ್ಷದ ಎಲ್ಲಾ ನಾಯಕರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆ ನಿಗದಿಯಂತೆ 2019ರಲ್ಲಿ ನಡೆದಿದ್ದರೆ ನಾವು ಸ್ಪರ್ಧಿಸುತ್ತಿದ್ದೇವೆ. ಆದರೆ ಅವಧಿಗೂ ಮುನ್ನ ನಡೆಯುತ್ತಿರುವುದರಿಂದ ನಮ್ಮ ಪಕ್ಷ ಸ್ಪರ್ಧೆಗೆ ಸಿದ್ಧವಾಗಿಲ್ಲ. ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಜನಸೇನಾ ಸ್ಪರ್ಧಿಸಲಿದೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ತೆಲಂಗಾಣದಲ್ಲಿ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ವೈಎಸ್ ಆರ್ ಕಾಂಗ್ರೆಸ್ ಸಹ ಚುನಾವಣೆಯಿಂದ ದೂರ ಉಳಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT