ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ತೆಹ್ರೀಕ್-ಇ-ಹುರಿಯತ್ ನಾಯಕ ಹಫೀಜುಲ್ಲಾಹ್ ಮಿರ್ ಹತ್ಯೆ

ಪ್ರತ್ಯೇಕತಾವಾದಿ ಸಯ್ಯದ್ ಅಲಿ ಶಾಹ್ ಗಿಲಾನಿಯವರ ತೆಹ್ರೀಕ್-ಇ-ಹುರಿಯತ್ ಸಂಘಟನೆಯ ನಾಯಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ...

ಶ್ರೀನಗರ: ಪ್ರತ್ಯೇಕತಾವಾದಿ ಸಯ್ಯದ್ ಅಲಿ ಶಾಹ್ ಗಿಲಾನಿಯವರ ತೆಹ್ರೀಕ್-ಇ-ಹುರಿಯತ್ ಸಂಘಟನೆಯ ನಾಯಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. 
ಪ್ರತ್ಯೇಕತಾವಾದಿಗಳ ಜಿಲ್ಲಾಧ್ಯಕ್ಷರಾಗಿದ್ದ ಹಫೀಜುಲ್ಲಾ ಮಿರ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 
ದುಷ್ಕರ್ಮಿಗಳ ದಾಳಿಗೆ ತೀವ್ರವಾಗಿ ಗಾಯಗೊಂಡಿದ್ದ ಮಿರ್ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ. 
ಅನಂತ್ ನಾಗ್ ಜಿಲ್ಲೆ ಅಕಿಂಗಾಮ್ ಗ್ರಾಮದಲ್ಲಿರುವ ಅಚಬಲ್ ಪ್ರದೇಶದಲ್ಲಿ ಹಫೀಜುಲ್ಲಾ ಅವರನ್ನು ಹತ್ಯೆ ಮಾಡಲಾಗಿದೆ. ಎರಡು ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹಫೀಜುಲ್ಲಾ ಅವರನ್ನು ಕಳೆದ ಅಕ್ಟೋಬರ್ ತಿಂಗಳಿನಲ್ಲಷ್ಟೇ ಬಿಡುಗಡೆ ಮಾಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT