ಪಿಣರಾಯ್ ವಿಜಯನ್ 
ದೇಶ

ಶಬರಿಮಲೆ: ಬಂಧಿತರು ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ಎಸ್ ವ್ಯಕ್ತಿಗಳು - ಕೇರಳ ಸಿಎಂ

ಶಬರಿಮಲೆ ಸನ್ನಿಧಾನಂನಲ್ಲಿ ಬಂಧಿಸಲಾದ 69 ವ್ಯಕ್ತಿಗಳು ಭಕ್ತರಲ್ಲ. ಅವರೆಲ್ಲಾ ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ ...

ತಿರುವನಂತಪುರಂ: ಶಬರಿಮಲೆ ಸನ್ನಿಧಾನಂನಲ್ಲಿ ಬಂಧಿಸಲಾದ 69 ವ್ಯಕ್ತಿಗಳು ಭಕ್ತರಲ್ಲ. ಅವರೆಲ್ಲಾ ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ ಎಸ್ ಕಾರ್ಯಕರ್ತರು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಕೇರಳ ಸಿಎಂ, ಶಬರಿಮಲೆಯನ್ನು ರಣರಂಗವಾಗಿಸುವ ಅಜೆಂಡಾದೊಂದಿಗೆ ಕರ ಸೇವಕರು ಅಲ್ಲಿಗೆ ಆಗಮಿಸಿದ್ದಾರೆ. ಶಬರಿಮಲೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ಸಹ ಭಾಗಿಯಾಗಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.
ಶಬರಿಮಲೆ ವಿವಾದದ ಸಂಪೂರ್ಣ ಲಾಭ ಪಡೆಯಲು ಬಿಜೆಪಿ ನಾಯಕರು ಹಾಗೂ ಸಚಿವರು ಅಲ್ಲಿಗೆ ಹೋಗಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ ಶಬರಿಮಲೆಯಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಲುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.
ನಿನ್ನೆ ಶಬರಿಮಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದ 69 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಸಿಎಂ, ಈ ಕ್ರಮದಿಂದಾಗಿ ಅಲ್ಲಿನ ಪರಿಸ್ಥಿತಿ ಸ್ವಲ್ಪ ತಿಳಿಗೊಂಡಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT