ಪಿಣರಾಯ್ ವಿಜಯನ್ 
ದೇಶ

ಶಬರಿಮಲೆ: ಬಂಧಿತರು ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ಎಸ್ ವ್ಯಕ್ತಿಗಳು - ಕೇರಳ ಸಿಎಂ

ಶಬರಿಮಲೆ ಸನ್ನಿಧಾನಂನಲ್ಲಿ ಬಂಧಿಸಲಾದ 69 ವ್ಯಕ್ತಿಗಳು ಭಕ್ತರಲ್ಲ. ಅವರೆಲ್ಲಾ ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ ...

ತಿರುವನಂತಪುರಂ: ಶಬರಿಮಲೆ ಸನ್ನಿಧಾನಂನಲ್ಲಿ ಬಂಧಿಸಲಾದ 69 ವ್ಯಕ್ತಿಗಳು ಭಕ್ತರಲ್ಲ. ಅವರೆಲ್ಲಾ ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ ಎಸ್ ಕಾರ್ಯಕರ್ತರು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಕೇರಳ ಸಿಎಂ, ಶಬರಿಮಲೆಯನ್ನು ರಣರಂಗವಾಗಿಸುವ ಅಜೆಂಡಾದೊಂದಿಗೆ ಕರ ಸೇವಕರು ಅಲ್ಲಿಗೆ ಆಗಮಿಸಿದ್ದಾರೆ. ಶಬರಿಮಲೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ಸಹ ಭಾಗಿಯಾಗಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.
ಶಬರಿಮಲೆ ವಿವಾದದ ಸಂಪೂರ್ಣ ಲಾಭ ಪಡೆಯಲು ಬಿಜೆಪಿ ನಾಯಕರು ಹಾಗೂ ಸಚಿವರು ಅಲ್ಲಿಗೆ ಹೋಗಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ ಶಬರಿಮಲೆಯಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಲುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.
ನಿನ್ನೆ ಶಬರಿಮಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದ 69 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಸಿಎಂ, ಈ ಕ್ರಮದಿಂದಾಗಿ ಅಲ್ಲಿನ ಪರಿಸ್ಥಿತಿ ಸ್ವಲ್ಪ ತಿಳಿಗೊಂಡಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT