ಸೋಮನಾಥ್ ಭಾರ್ತಿ 
ದೇಶ

ಮಹಿಳಾ ಪತ್ರಕರ್ತೆಗೆ ನಿಂದನೆ: ದೆಹಲಿ ಎಎಪಿ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ದೂರು ದಾಖಲು

ಮಹಿಳಾ ಪತ್ರಕರ್ತೆಯೊಬ್ಬರನ್ನು ನಿಂದಿಸಿದ ಆರೋಪದ ಮೇಲೆ ದೆಹಲಿ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ದೂರು ದಾಖಲಾಗಿದೆ.

ನೊಯ್ಡಾ: ಮಹಿಳಾ ಪತ್ರಕರ್ತೆಯೊಬ್ಬರನ್ನು ನಿಂದಿಸಿದ ಆರೋಪದ ಮೇಲೆ ದೆಹಲಿ ಶಾಸಕ ಸೋಮನಾಥ್ ಭಾರ್ತಿ ವಿರುದ್ಧ ದೂರು ದಾಖಲಾಗಿದೆ.
ಖಾಸಗಿ ನ್ಯೂಸ್ ಚಾನಲ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತೆಗೆ ಶಾಸಕ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಅವಳನ್ನು ವೇಶ್ಯಾವಾಟಿಕೆ ನಡೆಸುವಂತೆ ಕೇಳಿದ್ದಾರೆ ಎಂಬುದಾಗಿ ಸಂತ್ರಸ್ಥ ಪತ್ರಕರ್ತೆ ಪೋಲೀಸ್ ಠಾಣೆಯಲ್ಲಿ ದೂರಿತ್ತಿದ್ದಾರೆ. 
ಟಿವಿ ಸಂದರ್ಶನವೊಂದರಲ್ಲಿ ಪತ್ರಕರ್ತೆ, ನಿರೂಪಕಿಯಾಗಿದ್ದ ಮಹಿಳೆಯನ್ನು ಭಾರ್ತಿಯವರು "ಬಿಜೆಪಿಯ ಏಜೆಂಟ್" ಎಂದದ್ದಲ್ಲದೆ "ವೇಶ್ಯೆಯಾಗಲು ಸರಿಯಾದ ಆಯ್ಕೆ" ಎಂದು ಕರೆಯುವ ಮೂಲಕ ನಿಂದಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಪೋಲೀಸರು ಸದ್ಯ ಮಹಿಳೆಯ ದೂರನ್ನಾಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಆದರೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ ಶಾಸಕ ಭಾರ್ತಿ ನ್ಯೂಸ್ ಚಾನಲ್ ಹಾಗೂ ಅದರ ನಿರೂಪಕಿಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ನುಡಿದಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ನಡೆದ ದಾಳಿಯ ಕುರಿತು ಚರ್ಚಿಸಲು ತಾನು ಟಿವಿ ಸಂದರ್ಶನದಲ್ಲಿ ಪಾಲ್ಗೊಂಡಿದ್ದೆ. ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಲಾಗಿತ್ತು. ಆದರೆ ಚಾನಲ್ ನವರು ಕಾರ್ಯಕ್ರಮದ ದೃಶ್ಯಗಳನ್ನು ಬಹಳ ನಾಜೂಕಾಗಿ ತೋರಿಸಿದ್ದಾರೆ ಎಂದರು.
ನೊಯ್ಡಾದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ರಕರ್ತೆಯು ಶಾಸಕರ ವಿರುಧ ದೂರು ಸಲ್ಲಿಸಿದ್ದು ಭಾರತೀಯ ದಂಡ ಸಂಹಿತೆಯ 504 (ಉದ್ದೇಶಪೂರ್ವಕ ಅವಮಾನ) ಮತ್ತು 509 (ಪದಗಳ, ಸನ್ನೆಗಳ ಮೂಲಕ ಮಹಿಳೆಯರಿಗೆ ಅವಮಾನ )ರ ಸೆಕ್ಷನ್ ಗಳಡಿಯಲ್ಲಿ ಭಾರ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT