ಸಂಗ್ರಹ ಚಿತ್ರ 
ದೇಶ

ನೋಟು ನಿಷೇಧದಿಂದ ರೈತರಿಗೆ ಭಾರೀ ನಷ್ಟ: ವರದಿಯಲ್ಲಿ ಕೃಷಿ ಸಚಿವಾಲಯದ ಹೇಳಿಕೆ

ನೋಟು ನಿಷೇಧದಿಂದ ರೈತರಿಗೆ ಭಾರಿ ನಷ್ಟವಾಗಿದೆ ಎಂದು ಸ್ವತಃ ಕೇಂದ್ರ ಕೃಷಿ ಸಚಿವಾಲಯ ಹೇಳಿಕೊಂಡಿದೆ ಎಂದು ತಿಳಿದುಬಂದಿದೆ.

ನವದೆಹಲಿ: ನೋಟು ನಿಷೇಧದಿಂದ ರೈತರಿಗೆ ಭಾರಿ ನಷ್ಟವಾಗಿದೆ ಎಂದು ಸ್ವತಃ ಕೇಂದ್ರ ಕೃಷಿ ಸಚಿವಾಲಯ ಹೇಳಿಕೊಂಡಿದೆ ಎಂದು ತಿಳಿದುಬಂದಿದೆ.
ವರದಿಯೊಂದರ ಅನ್ವಯ ನೋಟು ನಿಷೇಧದಿಂದಾಗಿ ಲಕ್ಷಾಂತರ ರೈತರಿಗೆ ಚಳಿಗಾಲದ ಬೆಳೆಗೆ ಬಿತ್ತನೆಯ ಬೀಜ ಹಾಗೂ ಗೊಬ್ಬರಗಳನ್ನು ಖರೀದಿಸಲು ಸಾಧ್ಯವಾಗಲಿಲ್ಲ. ಇದರಿಂದ ರೈತರು ಭಾರಿ ನಷ್ಟ ಅನುಭವಿಸಿದ್ದಾರೆ ಎಂದು ಕೃಷಿ ಸಚಿವಾಲಯ ತನ್ನ ವರದಿಯಲ್ಲಿ ಹೇಳಿದೆ. 
ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಗೆ ಕೇಂದ್ರ ಕೃಷಿ ಸಚಿವಾಲಯ ಈ ವರದಿ ನೀಡಿದ್ದು, ಕಾಂಗ್ರೆಸ್ ಸಂಸದ ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಗೆ ನೋಟು ನಿಷೇಧದಿಂದಾಗಿರುವ ಪರಿಣಾಮದ ಬಗ್ಗೆ ಕೃಷಿ ಸಚಿವಾಲಯ, ಕಾರ್ಮಿಕ ಹಾಗೂ ಉದ್ಯೋಗ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಮಂಗಳವಾರ ವಿವರ ನೀಡಿವೆ.
ಕೃಷಿ ಸಚಿವಾಲಯ ಸಲ್ಲಿಸಿರುವ ವರದಿಯಲ್ಲಿ, ರೈತರು ಖಾರಿಫ್ ಬೆಳೆಯ ಫಸಲನ್ನು ಮಾರಾಟ ಮಾಡುವಾಗ ಅಥವಾ ರಾಬಿಬೆಳೆ ಬಿತ್ತನೆಯ ವೇಳೆ ನೋಟು ನಿಷೇಧ ಮಾಡಲಾಗಿದೆ. ಈ ಎರಡು ಚಟುವಟಿಕೆಯ ವೇಳೆ ದೊಡ್ಡ ಪ್ರಮಾಣದ ನಗದು ಹಣದ ಅಗತ್ಯವಿರುತ್ತದೆ. ಭಾರತ 2.63 ಲಕ್ಷ ರೈತರು ನಗದು ವ್ಯವಹಾರವನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ನೋಟು ನಿಷೇಧ ಪ್ರಕ್ರಿಯೆಯಿಂದಾಗಿ ರೈತರ ವಹಿವಾಟಿಗೆ ಹಿನ್ನಡೆಯುಂಟು ಮಾಡಿತ್ತು  ಎಂದು ವರದಿ ತಿಳಿಸಿದೆ.
ಅಂತೆಯೇ ಲಕ್ಷಾಂತರ ರೈತರು ಚಳಿಗಾಲದ ಬೆಳೆಗೆ ಬಿತ್ತನೆ ಬೀಜ ಹಾಗೂ ಗೊಬ್ಬರಗಳನ್ನು ಖರೀದಿಸಲು ಸಾಕಷ್ಟು ನಗದು ಹಣ ಹೊಂದಿರಲಿಲ್ಲ. ದೊಡ್ಡ ಜಮೀನ್ದಾರರು ತಮ್ಮ ಕೆಲಸದಾಳುಗಳಿಗೆ ದಿನಗೂಲಿ ನೀಡಲು ಹಾಗೂ ಬೆಳೆಯುತ್ತಿರುವ ಬೆಳೆಗೆ ಅಗತ್ಯವಿರುವ ಕೃಷಿ ವಸ್ತುಗಳನ್ನು ಖರೀದಿಸಲು ಸಮಸ್ಯೆ ಎದುರಿಸಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ಬೀಜ ನಿಗಮ ನಗದು ಬಿಕ್ಕಟ್ಟಿನಿಂದಾಗಿ ಸುಮಾರು 1.38 ಲಕ್ಷ ಕ್ವಿಂಟಾಲ್ ಗೋಧಿ ಬೀಜಗಳನ್ನು ಮಾರಾಟ ಮಾಡಲು ವಿಫಲವಾಗಿತ್ತು. ಗೋಧಿ ಬೀಜಗಳ ಮಾರಾಟಕ್ಕೆ ಹಳೆಯ 500 ಹಾಗೂ 1000 ನೋಟುಗಳನ್ನು ಬಳಸಲು ಸರ್ಕಾರ ಅನುಮತಿ ನೀಡಿದರೂ ಬೀಜ ಮಾರಾಟದಲ್ಲಿ ಏರಿಕೆಯಾಗಿರಲಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT