ಸಂಗ್ರಹ ಚಿತ್ರ 
ದೇಶ

ಕುಲಭೂಷಣ್‌ ಜಾಧವ್‌ ಪ್ರಕರಣ ಸಂಬಂಧ ರಾಜತಾಂತ್ರಿಕ ನೆರವು ಕೋರಿದ ಭಾರತ

ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ವಿಚಾರವಾಗಿ ಭಾರತ ರಾಜತಾಂತ್ರಿಕ ನೆರವು ಕೋರಿದೆ.

ನವದೆಹಲಿ: ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ವಿಚಾರವಾಗಿ ಭಾರತ ರಾಜತಾಂತ್ರಿಕ ನೆರವು ಕೋರಿದೆ.
ಇಂಧೋರ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು, ಎರಡು ದಿನಗಳ ಹಿಂದೆಯೇ ಕೇಂದ್ರ ವಿದೇಶಾಂಗ ಇಲಾಖೆಯಿಂದ ಈ ಪ್ರಕ್ರಿಯೆ ನಡೆದಿದೆ. ಅಂತೆಯೇ ಫೆಬ್ರವರಿ 18ರಿಂದ 21ರವರೆಗೆ ಹೇಗ್‌ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಕರಣದ (ಐಸಿಜೆ) ವಿಚಾರಣೆ ನಡೆಯಲಿದೆ ಎಂದು ಹೇಳಿದರು. 
ಬೇಹುಗಾರಿಕೆ ಮತ್ತು ಪಾಕಿಸ್ತಾನದಲ್ಲಿ ಭಯೋತ್ಪಾದನೆ ನಡೆಸಿರುವ ಆರೋಪದಲ್ಲಿ ಕುಲಭೂಷಣ್ ಜಾಧವ್‌ ಗೆ ಪಾಕಿಸ್ತಾನದ ಸೇನಾ ನ್ಯಾಯಾಲಯ ಕಳೆದ ಏಪ್ರಿಲ್‌ನಲ್ಲಿ ಮರಣದಂಡನೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಮೇ ತಿಂಗಳಲ್ಲಿ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದೆ. ಅಲ್ಲದೇ, ತಮ್ಮ ವಾದ ಮಂಡಿಸಲು ಮತ್ತು ಭಾರತದ ರಾಯಭಾರ ಕಚೇರಿ ಸಂಪರ್ಕಿಸಲು ಜಾಧವ್ ಗೆ ಪಾಕಿಸ್ತಾನ ಅವಕಾಶ ಕೊಟ್ಟಿಲ್ಲ ಎಂದು ಈ ಹಿಂದೆ ಭಾರತ ಆರೋಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT