ಕೇಜ್ರಿವಾಲ್ ಮೇಲೆ ಖಾರದಪುಡಿ ದಾಳಿ ನಡೆಸಿದ ವ್ಯಕ್ತಿ ದೆಹಲಿ ಸಚಿವಾಲಯ ಪ್ರವೇಶಿಸಲು ಪಾಸ್ ಪಡೆದಿದ್ದ! 
ದೇಶ

ಕೇಜ್ರಿವಾಲ್ ಮೇಲೆ ಖಾರದಪುಡಿ ದಾಳಿ ನಡೆಸಿದ ವ್ಯಕ್ತಿ ದೆಹಲಿ ಸಚಿವಾಲಯ ಪ್ರವೇಶಿಸಲು ಪಾಸ್ ಪಡೆದಿದ್ದ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎಸೆದಿದ್ದ ವ್ಯಕ್ತಿ ದೆಹಲಿ ಸಚಿವಾಲಯಕ್ಕೆ ಪ್ರವೇಶಿಸುವುದಕ್ಕೆ ಪಾಸ್ ನ್ನು ಹೊಂದಿದ್ದ ವಿಷಯ ಈಗ ಬಹಿರಂಗವಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ  ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ  ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ  ಖಾರದ ಪುಡಿ ಎಸೆದಿದ್ದ ವ್ಯಕ್ತಿ ದೆಹಲಿ ಸಚಿವಾಲಯಕ್ಕೆ ಪ್ರವೇಶಿಸುವುದಕ್ಕೆ ಪಾಸ್ ನ್ನು ಹೊಂದಿದ್ದ ವಿಷಯ ಈಗ ಬಹಿರಂಗವಾಗಿದೆ. 
ಸಿಎಂ ಮೇಲೆ ದಾಳಿ ನಡೆಸಿರುವ ವ್ಯಕ್ತಿ ಅನಿಲ್ ಶರ್ಮಾ, ಅನಾರೋಗ್ಯಕ್ಕೀಡಾಗಿರುವ ತನ್ನ ಸಂಬಂಧಿಗೆ ಸಹಾಯ ಕೋರಿ ದೆಹಲಿ ಸಚಿವಾಲಯಕ್ಕೆ ಭೇಟಿ ನೀಡಿದ್ದ, ಆತನ ಬಳಿ ದೆಹಲಿ ಸಚಿವಾಲಯಕ್ಕೆ ಪ್ರವೇಶಿಸುವುದಕ್ಕೆ ಪಾಸ್ ಇತ್ತು ಎಂದು ತಿಳಿದುಬಂದಿದೆ. 
ಮುಖ್ಯಮಂತ್ರಿಗಳು ಸಾರ್ವಜನಿಕ  ಅಹವಾಲು ಸ್ವೀಕಾರ ನಿರ್ವಹಣಾ ವ್ಯವಸ್ಥೆ(ಪಿಜಿಎಂಎಸ್) ನಲ್ಲಿ ಮಹಿಳೆ ಹಾಗೂ ಪುರುಷರನ್ನು ಪ್ರತ್ಯೇಕವಾಗಿ ತಪಾಸಣೆ ಮಾಡಲಾಗುತ್ತದೆ. ಅದರ ಹೊರತಾಗಿಯೂ ಸಹ ಮುಖ್ಯಮಂತ್ರಿಗಳ ಮೇಲೆ ದಾಳಿ ನಡೆದಿದೆ. ದೆಹಲಿಯಲ್ಲಿ ಮುಖ್ಯಮಂತ್ರಿಗೂ ಸುರಕ್ಷತೆ ಇಲ್ಲದಂತಾಗಿದೆ. ಇದು ಗಂಭೀರವಾದ ಭದ್ರತಾ ವೈಫಲ್ಯ ಎಂದು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಹಾಗೂ ದೆಹಲಿ ಪೊಲೀಸರ ಷಡ್ಯಂತ್ರದಿಂದ ಹೀಗಾಗಿದೆ ಎಂದು ಆಪ್ ಆರೋಪಿಸಿದೆ.
ಆದರೆ ದೆಹಲಿ ಮುಖ್ಯಮಂತ್ರಿಗಳ ಮೇಲೆ ಖಾರದ ಪುಡಿ ಎರಚಿ ದಾಳಿ ನಡೆಸಿರುವುದನ್ನು ದೆಹಲಿ ಪೊಲೀಸರು ಖಚಿತವಾಗಿ ಉಲ್ಲೇಖಿಸಿಲ್ಲ. ಆದರೆ ಸಿಎಂ ಮೇಲೆ ಏಕಾಏಕಿ ದಾಳಿ ನಡೆಸಿರುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ವಿಚಾರಾಣೆಗೊಳಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT