ಸಂಗ್ರಹ ಚಿತ್ರ 
ದೇಶ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: 24 ಗಂಟೆಗಳಲ್ಲಿ ತಮಿಳುನಾಡು, ಪಾಂಡಿಚೆರಿಯಲ್ಲಿ ಭಾರೀ ಮಳೆ ಸಾಧ್ಯತೆ

ಗಜ ಚಂಡಮಾರುತ ದುರ್ಬಲಗೊಳ್ಳುತ್ತಿದ್ದಂತೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಹಾಗೂ ಪಾಂಡಿಚೆರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ...

ಚೆನ್ನೈ: ಗಜ ಚಂಡಮಾರುತ ದುರ್ಬಲಗೊಳ್ಳುತ್ತಿದ್ದಂತೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಹಾಗೂ ಪಾಂಡಿಚೆರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಬುಧವಾರ ಹೇಳಿದ್ದಾರೆ. 
ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರತ ಕುಸಿತ ತಮಿಳುನಾಡು ಹಾಗೂ ಪಾಂಡಿಚೆರಿಯತ್ತ ಸಾಗಲಿದ್ದು, ಇದರ ಪರಿಣಾಮವಾಗಿ ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಚೆನ್ನೈ ಹವಾಮಾನ ಇಲಾಖೆಯ ಜಂಟಿ ಉಪ ನಿರ್ದೇಶಕ ಎಸ್. ಬಾಲಚಂದ್ರನ್ ಅವರು, ತಮಿಳುನಾಡು ಹಾಗೂ ಪಾಂಡಿಚೆರಿಯಲ್ಲಿ ಸಾಧಾರಣ ಮಳೆ ಸಾಧ್ಯತೆಗಳಿವೆ. ಕೆಲ ಭಾಗಗಳಲ್ಲಿ ಮಾತ್ರ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ ಎಂದಿದ್ದಾರೆ. 
ಕಾಂಚೀಪುರಂ, ಪಾಂಡಿಚೆರಿ, ವಿಲ್ಲುಪುರಂ, ಕುಡ್ಡಲೊರ್, ತಿರುವಣ್ಣಾಮಲೈ, ನಾಗಪಟ್ಟಿನಂಮ್, ಕರೈಕಲ್, ಅರಿಯಲೂರ್ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. 
ಕಳೆದ 24 ಗಂಟೆಗಳಲ್ಲಿ ತಮಿಳುನಾಡು ಹಾಗೂ ಪಾಂಡಿಚೆರಿಯಲ್ಲಿ ಸಾಧಾರಣ ಮಳೆಯಾಗಿದ್ದು, ಸೆಂಗೊಟ್ಟೈ ಹಾಗೂ ತಿರುನೆಲ್ವೇಲಿ ಜಿಲ್ಲೆಗಳಲ್ಲಿ 8 ಸೆಂ.ಮೀಗಳಷ್ಟು ಮಳೆಯಾಗಿದೆ. 
ಈ ನಡುವೆ ತಮಿಳುನಾಡು ಹಾಗೂ ಮನ್ನಾರ್'ನ ಗಲ್ಫ್ ಬಳಿ ತೆರಳದಂತೆ ತಮಿಳುನಾಡು ಮೀನುಗಾರರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT