ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡುವುದಿಲ್ಲ: ಕೇರಳ ಮುಖ್ಯಮಂತ್ರಿ

ಶಬರಿಮಲೆ ದೇಗುಲವನ್ನು ಮತ್ತೊಂದು ಅಯೋಧ್ಯೆಯಾಗಿ ಮಾಡಲು ಸಂಘ ಪರಿವಾರದವರಿಗೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಹೇಳಿದ್ದಾರೆ...

ತಿರುವನಂತಪುರ: ಶಬರಿಮಲೆ ದೇಗುಲವನ್ನು ಮತ್ತೊಂದು ಅಯೋಧ್ಯೆಯಾಗಿ ಮಾಡಲು ಸಂಘ ಪರಿವಾರದವರಿಗೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಹೇಳಿದ್ದಾರೆ. 
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕರ ಸೇವಕರ ಮೂಲಕ ಸಂಘ ಪರಿವಾರದವರು ಶಬರಿಮಲೆಯನ್ನು ಹೈಜಾಕ್ ಮಾಡಲು ಪಿತೂರಿ ನಡೆಸುತ್ತಿದ್ದಾರೆ. ನಂಬಿಕೆಯ ಹೆಸರಿನಲ್ಲು ಕೋಮು ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. 
ಬಿಜೆಪಿ ಹಾಗೂ ಆರ್'ಎಸ್ಎಸ್ ಜೊತೆಗೂಡಿ ಕೋಮು ಸೌಹಾರ್ದತೆಗೆ ಧಕ್ಕೆಯುಂಟೂ ಮಾಡಲು ಯತ್ನಿಸುತ್ತಿದೆ. ಪ್ರತಿಭಟನೆಯ ನಿಜವಾದ ಉದ್ದೇಶಗಳು ಈಗಾಗಲೇ ಬಹಿರಂಗಗೊಂಡಿದೆ. ತನ್ನ ರಾಜಕೀಯ ಹೋರಾಟಕ್ಕಾಗಿ ದೇಗುಲ ಬಳಕೆ ಮಾಡಿಕೊಳ್ಳುವುದನ್ನು ಬಿಜೆಪಿ ನಿಲ್ಲಿಸಬೇಕು. ತಮ್ಮ ರಾಜಕೀಯ ಲಾಭಕ್ಕಾಗಿ ಭಕ್ತಾದಿಗಳಿಗೆ ಸಮಸ್ಯೆಗಲನ್ನು ನೀಡಬಾರದು. 
ರಾಜಕೀಯ ಹೋರಾಟ ನಡೆಸಲೇಬೇಕಿದ್ದರೆ, ನಮ್ಮ ಹಾಗೂ ನಿಮ್ಮ ನಡುವೆ ನೇರನೇರ ನಡೆಯಲಿ. ಇದಕ್ಕೆ ಶಬರಿಮಲೆ ವೇದಿಕೆಯೇಕೆ ಬೇಕು? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT