ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡುವುದಿಲ್ಲ: ಕೇರಳ ಮುಖ್ಯಮಂತ್ರಿ

ಶಬರಿಮಲೆ ದೇಗುಲವನ್ನು ಮತ್ತೊಂದು ಅಯೋಧ್ಯೆಯಾಗಿ ಮಾಡಲು ಸಂಘ ಪರಿವಾರದವರಿಗೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಹೇಳಿದ್ದಾರೆ...

ತಿರುವನಂತಪುರ: ಶಬರಿಮಲೆ ದೇಗುಲವನ್ನು ಮತ್ತೊಂದು ಅಯೋಧ್ಯೆಯಾಗಿ ಮಾಡಲು ಸಂಘ ಪರಿವಾರದವರಿಗೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಹೇಳಿದ್ದಾರೆ. 
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕರ ಸೇವಕರ ಮೂಲಕ ಸಂಘ ಪರಿವಾರದವರು ಶಬರಿಮಲೆಯನ್ನು ಹೈಜಾಕ್ ಮಾಡಲು ಪಿತೂರಿ ನಡೆಸುತ್ತಿದ್ದಾರೆ. ನಂಬಿಕೆಯ ಹೆಸರಿನಲ್ಲು ಕೋಮು ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. 
ಬಿಜೆಪಿ ಹಾಗೂ ಆರ್'ಎಸ್ಎಸ್ ಜೊತೆಗೂಡಿ ಕೋಮು ಸೌಹಾರ್ದತೆಗೆ ಧಕ್ಕೆಯುಂಟೂ ಮಾಡಲು ಯತ್ನಿಸುತ್ತಿದೆ. ಪ್ರತಿಭಟನೆಯ ನಿಜವಾದ ಉದ್ದೇಶಗಳು ಈಗಾಗಲೇ ಬಹಿರಂಗಗೊಂಡಿದೆ. ತನ್ನ ರಾಜಕೀಯ ಹೋರಾಟಕ್ಕಾಗಿ ದೇಗುಲ ಬಳಕೆ ಮಾಡಿಕೊಳ್ಳುವುದನ್ನು ಬಿಜೆಪಿ ನಿಲ್ಲಿಸಬೇಕು. ತಮ್ಮ ರಾಜಕೀಯ ಲಾಭಕ್ಕಾಗಿ ಭಕ್ತಾದಿಗಳಿಗೆ ಸಮಸ್ಯೆಗಲನ್ನು ನೀಡಬಾರದು. 
ರಾಜಕೀಯ ಹೋರಾಟ ನಡೆಸಲೇಬೇಕಿದ್ದರೆ, ನಮ್ಮ ಹಾಗೂ ನಿಮ್ಮ ನಡುವೆ ನೇರನೇರ ನಡೆಯಲಿ. ಇದಕ್ಕೆ ಶಬರಿಮಲೆ ವೇದಿಕೆಯೇಕೆ ಬೇಕು? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT