ರೈಲು ದುರಂತ ನಡೆದ ಸ್ಥಳ 
ದೇಶ

ಅಮೃತಸರ ರೈಲು ದುರಂತಕ್ಕೆ ಜನರ ನಿರ್ಲಕ್ಷವೇ ಕಾರಣ: ತನಿಖಾ ವರದಿ

ದಸರಾ ಹಬ್ಬದಂದು ದೇಶವನ್ನೇ ಬೆಚ್ಚಿಬೀಳಿಸಿದ್ದ, 60 ಮಂದಿಯನ್ನು ಬಲಿಪಡೆದ ಅಮೃತಸರ ರೈಲು ದುರಂತಕ್ಕೆ ಜನರ...

ನವದೆಹಲಿ: ದಸರಾ ಹಬ್ಬದಂದು ದೇಶವನ್ನೇ ಬೆಚ್ಚಿಬೀಳಿಸಿದ್ದ, 60 ಮಂದಿಯನ್ನು ಬಲಿಪಡೆದ ಅಮೃತಸರ ರೈಲು ದುರಂತಕ್ಕೆ ಜನರ ನಿರ್ಲಕ್ಷವೇ ಕಾರಣ ಎಂದು ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು ಗುರುವಾರ ವರದಿ ನೀಡಿದ್ದಾರೆ.
ಅಕ್ಟೋಬರ್ 19ರಂದು ಪಂಜಾಬ್​ನ ಅಮೃತಸರದ ಚೌರಾ ಬಜಾರ್​ ಬಳಿ ನಡೆಯುತ್ತಿದ್ದ ದಸರಾ ಉತ್ಸವದ ವೇಳೆ ಜನಸಮೂಹದ ಮೇಲೆಯೇ ರೈಲು ಹರಿದ ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತ ಎಸ್ ಕೆ ಪಾಠಕ್ ಅವರು ಇಂದು ವರದಿ ನೀಡಿದ್ದು, ನಾಗರಿಕರ ಅಜಾಗರುಕತೆಯೇ ದುರಂತಕ್ಕೆ ಕಾರಣ ಎಂದು ಹೇಳಿದ್ದಾರೆ.
ತಾವು ನಿಂತಿರುವ ಜಾಗ ರೈಲ್ವೆ ಹಳಿ ಎಂದು ಗೊತ್ತಿದ್ದರೂ, ರೈಲು ಬರುವ ಬಗ್ಗೆ ತಿಳಿದಿದ್ದರೂ, ಜನ ಅದ್ಯಾವುದನ್ನೂ ಲೆಕ್ಕಿಸದೇ ಸಮಾರಂಭ ವೀಕ್ಷಿಸುತ್ತಿದ್ದರು. ಈ ವೇಳೆ ಏಕಾಏಕಿ ರೈಲು ಬಂದ ಹಿನ್ನೆಲೆಯಲ್ಲಿ ದುರಂತ ಸಂಭವಿಸಿದೆ ಎಂದು ತನಿಖಾ ವರದಿ ತಿಳಿಸಿದೆ.
ವಾಸ್ತವಿಕ ಮತ್ತು ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಎಚ್ಚರಿಕೆಯಿಂದ ಪರಿಗಣಿಸಿ ನಾನು ಈ ವರದಿ ನೀಡಿದ್ದು, ಜನರ ನಿರ್ಲಕ್ಷವೇ ದುರಂತಕ್ಕೆ ಕಾರಣ ಎಂದು ಪಾಠಕ್ ಅವರು ಹೇಳಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳುಹಿಸದಿರಲು ಕೆಲವು ಶಿಫಾರಸುಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT