ಮೃತ ಅಮರಿಕ ಪ್ರವಾಸಿಗ ಮತ್ತು ಬುಡಕಟ್ಟು ವ್ಯಕ್ತಿ 
ದೇಶ

25 ಸಾವಿರ ರೂ. ಹಣ ನೀಡಿ ಸಾವಿನ ದ್ವೀಪಕ್ಕೆ ತೆರಳಿದ್ದ ಅಮೆರಿಕ ಪ್ರವಾಸಿಗ!

ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಅಮೆರಿಕ ಪ್ರವಾಸಿಗನ ಕೊಲೆ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಉದ್ಜೇಶಪೂರ್ವಕವಾಗಿಯೇ ಪ್ರವಾಸಿಗ ಜಾನ್ ಅಲೆನ್ ಚೌ ಸೆಂಟಿನೆಲ್...

ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ ಅಮೆರಿಕ ಪ್ರವಾಸಿಗನ ಕೊಲೆ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಉದ್ಜೇಶಪೂರ್ವಕವಾಗಿಯೇ ಪ್ರವಾಸಿಗ ಜಾನ್ ಅಲೆನ್ ಚೌ ಸೆಂಟಿನೆಲ್ ದ್ವೀಪಕ್ಕೆ ತೆರಳಿದ್ದನಂತೆ.
ಹೌದು.. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಸಾಹಸಯಾತ್ರೆ ಕೈಗೊಂಡಿದ್ದ ಅಮೆರಿಕ ಪ್ರಜೆಯೊಬ್ಬ ಅಕ್ರಮವಾಗಿ ಅಂಡಮಾನ್ ದ್ವೀಪದೊಳಗೆ ಪ್ರವೇಶಿಸಿದ್ದು, ಸೆಂಟಿನಲೀಸ್ ಬುಡಕಟ್ಟು ಜನರು ಆತನನ್ನು ಕೊಂದು ಹಾಕಿದ್ದಾರೆ. ಈ ಸಂಬಂಧ ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರು 7 ಮಂದಿ ಮೀನುಗಾರರನ್ನು ಬಂಧಿಸಿದ್ದು, ಈ ಮೀನುಗಾರರೇ ಅಮೆರಿಕದ ಪ್ರವಾಸಿಗ ಜಾನ್ ಅಲೆನ್ ಚೌ ನನ್ನು ಬೋಟ್ ಮೂಲಕ ಸೆಂಟಿನೆಲ್ ದ್ವೀಪಕ್ಕೆ ಕರೆದೊಯ್ದಿದ್ದರು ಎನ್ನಲಾಗಿದೆ.
ಆದರೆ ಪ್ರಸ್ತುತ ವಿಚಾರಣೆ ವೇಳೆ ಬಂಧಿತ ಮೀನುಗಾರರು ಬಾಯಿ ಬಿಟ್ಟಿರುವ ಅಂಶಗಳು ಎಲ್ಲರ ಕುತೂಹಲಕ್ಕೆ ಕಾರಣವಾಗಿದ್ದು, ಪ್ರವಾಸಿಗ ಜಾನ್ ಅಲೆನ್ ಚೌ ಉದ್ದೇಶಪೂರ್ವಕವಾಗಿಯೇ ಆ ಸಂರಕ್ಷಿತ ದ್ವೀಪಕ್ಕೆ ತೆರಳಿದ್ದನಂತೆ. ಇದಕ್ಕಾಗಿ ಮೀನುಗಾರರಿಗೆ 25 ಸಾವಿರ ರೂ ಹಣ ಕೂಡ ನೀಡಿದ್ದನಂತೆ. ಜಾನ್ ಅಲೆನ್ ಚೌ ನನ್ನು ಅಪಾಯಕಾರಿ ದ್ವೀಪಕ್ಕೆ ಕರೆದೊಯ್ಯಲು ಮೀನುಗಾರರು ಆರಂಭದಲ್ಲಿ ನಿರಾಕರಿಸಿದರಾದರೂ ಆತ ಮೀನುಗಾರರಿಗೆ ಹಣ ಆಮಿಷ ಒಡ್ಡಿ ಬಲವಂತವಾಗಿ ದ್ವೀಪಕ್ಕೆ ತೆರಳಲು ಮನವಿ ಮಾಡಿದ್ದನಂತೆ.
ನವೆಂಬರ್ 16ರಂದು ಜಾನ್ ಅಲೆನ್ ಚೌ ನನ್ನು 7 ಮಂದಿ ಮೀನುಗಾರರು ಆ ದ್ವೀಪಕ್ಕೆ ಬಿಟ್ಟು ವಾಪಸ್ ಆಗಿದ್ದಾರೆ. ಆದರೆ ಮರು ಕ್ಷಣದಲ್ಲೇ ಬುಡಕಟ್ಟು ಸಮುದಾಯದವರು 27 ವರ್ಷದ  ಜಾನ್ ಅಲೆನ್ ಚೌ ಮೇಲೆ ಬಿಲ್ಲುಬಾಣಗಳಿಂದ ಹಲ್ಲೆ ಮಾಡಿ ಕೊಂದು ಹಾಕಿದರು. ಅಲ್ಲದೆ ಮೀನುಗಾರರು ನೋಡುತ್ತಿದ್ದಂತೆಯೇ ಆತನ ದೇಹವನ್ನು ಕಡಲಕಡೆ ಎಳೆದೊಯ್ದರು ಎಂದು ಮೀನುಗಾರರು ಮಾಹಿತಿ ನೀಡಿದ್ದಾರೆ.
ಇನ್ನು ಜಾನ್ ಅಲೆನ್ ಚೌ ಮೃತದೇಹ ಇನ್ನೂ ಪತ್ತೆಯಾಗಿಲ್ಲವಾದರೂ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನು ಆ ದ್ವೀಪದಲ್ಲಿ ಹೆಲಿಕಾಪ್ಟರ್ ಇಳಿಸುವುದು ಕೂಡ ಅಪಾಯಕಾರಿ. ಏಕೆಂದರೆ ಸೆಂಟಿನಿಲಿಗಳನ್ನು ಸಂಪರ್ಕಿಸಲು ಯತ್ನಿಸಿದರೆ ಪ್ರತಿಯಾಗಿ ಏನು ಬೇಕಾದರೂ ಮಾಡಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ ಬಹಳ ಸೂಕ್ಷ್ಮವಾದ ಪ್ರದೇಶ. ಇಲ್ಲಿ ಪ್ರವೇಶಿಸುವುದಕ್ಕೆ ಪೂರ್ವಾನುಮತಿ ಅಗತ್ಯ. ಬುಡಕಟ್ಟು ಸಮುದಾಯದ ಸಂರಕ್ಷಣೆ ಮಾತ್ರವಲ್ಲ, ಸೈನ್ಯಕ್ಕೆ ಸಂಬಂಧಿಸಿದ ಮುಖ್ಯವಾದ ನಿಯೋಜನೆ ಇಲ್ಲಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT