ಮತದಾರರ ಬಳಿ ಮನವಿ ಮಾಡುತ್ತಿರುವ ಅಕುಲ ಹನುಮಂತ 
ದೇಶ

ತೆಲಂಗಾಣ: ಮತದಾರರ ಕೈಗೆ ಚಪ್ಪಲಿ ಕೊಟ್ಟು ಹೊಡೆಯಿರಿ ಎಂದ ಅಭ್ಯರ್ಥಿ! ವಿಡಿಯೋ ವೈರಲ್

ಹಣ ನೀಡಿ ಮತ ಕೇಳುವುದು ಸಾಮಾನ್ಯ.. ಆದರೆ ತೆಲಂಗಾಣದಲ್ಲಿ ಓರ್ವ ಅಭ್ಯರ್ಥಿ ಮತದಾರರ ಕೈಗೆ ಚಪ್ಪಲಿ ಕೊಟ್ಟ ಕೆಲಸ ಮಾಡದಿದ್ದರೆ ಇದರಿಂದಲೇ ನನ್ನನ್ನು ಹೊಡೆಯಿರಿ ಎಂದು ಹೇಳುವ ಮೂಲಕ ವಿನೂತನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಹೈದರಾಬಾದ್: ಹಣ ನೀಡಿ ಮತ ಕೇಳುವುದು ಸಾಮಾನ್ಯ.. ಆದರೆ ತೆಲಂಗಾಣದಲ್ಲಿ ಓರ್ವ ಅಭ್ಯರ್ಥಿ ಮತದಾರರ ಕೈಗೆ ಚಪ್ಪಲಿ ಕೊಟ್ಟ ಕೆಲಸ ಮಾಡದಿದ್ದರೆ ಇದರಿಂದಲೇ ನನ್ನನ್ನು ಹೊಡೆಯಿರಿ ಎಂದು ಹೇಳುವ ಮೂಲಕ ವಿನೂತನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.
ಹೌದು... ತೆಲಂಗಾಣ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಮತದಾನದ ದಿನಾಂಕ ಹತ್ತಿರಾವಾಗುತ್ತಿದ್ದಂತೆಯೇ ಮತದಾರರ ಸೆಳೆಯಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಏತನ್ಮಧ್ಯೆ ಪಕ್ಷೇತರ ಅಭ್ಯರ್ಥಿಯೊಬ್ಬರು ಮತ ಕೇಳುತ್ತಿರುವ ರೀತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮತದಾರರ ಕೈಗೆ ಚಪ್ಪಲಿ ಕೊಟ್ಟು ಅಭ್ಯರ್ಥಿ ಮತಕೇಳುವ ಮೂಲಕ ಇದೀಗ ಸುದ್ದಿಗೆ ಗ್ರಾಸವಾಗಿದ್ದಾರೆ.
ತೆಲಂಗಾಣದ ಕೊರುಟ್ಲಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಮನೆಮನೆ ಪ್ರಚಾರಕ್ಕೆ ತೆರಳುವಾಗ ಪ್ರತಿಮನೆಯ ಸದಸ್ಯರ ಕೈಗೂ ಚಪ್ಪಲಿಯೊಂದನ್ನು ನೀಡುತ್ತಿದ್ದಾರೆ. ಟಿಆರ್​ಎಸ್​ ಸೀನಿಯರ್​ ಲೀಡರ್​ ವಿದ್ಯಾಸಾಗರ್​ ರಾವ್ ಗೆ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿದಿರುವ ಅಕುಲ ಹನುಮಂತ ಎಂಬವರು ಮೆಟ್ಟುಪಲ್ಲಿಯಲ್ಲಿ ಮನೆಮನೆ ಪ್ರಚಾರದಲ್ಲಿ ತೊಡಗಿದ್ದ ವೇಳೆ, ಅಲ್ಲಿನ ಗ್ರಾಮಸ್ಥರ ಕೈಗೆ ಚಪ್ಪಲಿ ಕೊಟ್ಟು ಕೈ ಮುಗಿದು ವೋಟ್​ ಕೇಳುತ್ತಿದ್ದಾರೆ. ಹಾಗಂತ ಅವರ ಚಿಹ್ನೆ ಚಪ್ಪಲಿಯಲ್ಲ. ಬದಲಾಗಿ, ಚಪ್ಪಲಿ ಮೂಲಕ ಜನರಿಗೆ ಆಶ್ವಾಸನೆ ನೀಡುತ್ತಿರುವ ಅವರು ತಾವು ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದಲ್ಲಿ ಇದೇ ಚಪ್ಪಲಿಯಲ್ಲಿ ತಮಗೆ ಹೊಡೆಯಿರಿ ಎಂದು ಪ್ರಚಾರ ಮಾಡುತ್ತಿದ್ದಾರೆ. 
ಈ ಬಗ್ಗೆ ಮಾತನಾಡಿರುವ ಅವರು, ಕಳೆದ ಕೆಲ ದಶಕಗಳಿಂದಲೂ ಇಲ್ಲಿ ಟಿಆರ್ ಎಸ್ ಪ್ರಭಾವವಿದೆ. ಆದರೆ ಗೆದ್ದ ಅಭ್ಯರ್ಥಿಗಳಿಂದ ಇಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಹೀಗಾಗಿ ಈ ಬಾರಿ ಖುದ್ಧು ತಾವೇ ನಿಂತಿದ್ದು, ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದೇನೆ. ಹೀಗಾದರೂ ಜನರು ತಮ್ಮ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಲಿ ಎಂಬುದು ನನ್ನ ಉದ್ದೇಶ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT