ಕೆ ಚಂದ್ರಶೇಖರ್ ರಾವ್ 
ದೇಶ

ಪ್ರಧಾನಿ ಮೋದಿಗೆ ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ: ಕೆಸಿಆರ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ 'ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ ಎಂದು ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ...

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ 'ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ ಎಂದು ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಶುಕ್ರವಾರ ಆರೋಪಿಸಿದ್ದಾರೆ.
ಇಂದು ನರ್ಸಂಪೇಟ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಟಿಆರ್ ಎಸ್ ಮುಖ್ಯಸ್ಥ, ಪ್ರಧಾನಿಗೆ ಎಲ್ಲರನ್ನೂ ಸಮಾನವಾಗಿ ನೋಡಿಕೊಳ್ಳುವ ಹೃದಯವಿಲ್ಲ. ಮೋದಿಗೆ ಮತ್ತು ಬಿಜೆಪಿಗೆ 'ಕೋಮುವಾದಿ ಹುಚ್ಚು' ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರಿ ನೌಕರಿಯಲ್ಲಿರುವ ಮುಸ್ಲಿಮರ ಮೀಸಲಾತಿಯನ್ನು ಶೇ.4ರಿಂದ ಶೇ.12ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.6ರಿಂದ 10ಕ್ಕೆ ಏರಿಸಬೇಕು ಎಂದು ನಿರ್ಣಯ ಕೈಗೊಂಡಿದ್ದರೂ ಕೇಂದ್ರ ಸರ್ಕಾರ ಅದನ್ನು ತಡೆ ಹಿಡಿದಿದೆ ಎಂದು ಕೆಸಿಆರ್ ಆರೋಪಿಸಿದರು.
ಮೋದಿ ಮತ್ತು ಬಿಜೆಪಿ ಒಂದು ಕಾಯಿಲೆ ಇದೆ. ಪ್ರತಿಯೊಂದು ವಿಚಾರದಲ್ಲಿ ಹಿಂದೂ-ಮುಸ್ಲಿಮರನ್ನು ವಿಭಜನೆ ಮಾಡಲು ನೋಡುತ್ತಾರೆ. ಇದರ ಹೊರತು ಅವರಿಗೆ ಬೇರೆ ಏನೂ ಗೊತ್ತಿಲ್ಲ ಎಂದರು.
ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 17 ಲೋಕಸಭಾ ಕ್ಷೇತ್ರದಲ್ಲಿ ಜನ ಟಿಆರ್ ಎಸ್ ಅನ್ನು ಗೆಲ್ಲಿಸಿದರೆ ಮೀಸಲಾತಿಯನ್ನು ಹೆಚ್ಚಿಸುವಂತೆ ನೋಡಿಕೊಳ್ಳಲಾಗುವುದು ಎಂದು ಚಂದ್ರಶೇಖರ್ ರಾವ್ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT