ವಸುಂದರಾ ರಾಜೆ 
ದೇಶ

ರಾಜಸ್ತಾನ ವಿಧಾನಸಭೆ ಚುನಾವಣೆ: 4 ಸಚಿವರು ಸೇರಿದಂತೆ 11 ಬಂಡಾಯಗಾರರನ್ನು ವಜಾಗೊಳಿಸಿದ ಬಿಜೆಪಿ

ಪಕ್ಷಕ್ಕೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಿದ್ದ ವಸುಂದರಾ ರಾಜೇ ಸಂಪುಟದ 4 ಸಚಿವರು ಸೇರಿದಂತೆ 11 ಬಂಡಾಯಗಾರರನ್ನು ರಾಜಸ್ತಾನ ಬಿಜೆಪಿ ವಜಾಗೊಳಿಸಿದೆ...

ಜೈಪುರ: ಪಕ್ಷಕ್ಕೆ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಿದ್ದ ವಸುಂದರಾ ರಾಜೇ ಸಂಪುಟದ 4 ಸಚಿವರು ಸೇರಿದಂತೆ 11 ಬಂಡಾಯಗಾರರನ್ನು ರಾಜಸ್ತಾನ ಬಿಜೆಪಿ ವಜಾಗೊಳಿಸಿದೆ, 
ಮುಂಬರುವ ರಾಜಸ್ತಾನ ವಿಧಾನಸಭೆ ಚುನಾವಣೆಗೆ ಬಿಜೆಪಿ ಕೆಲ ಅಭ್ಯರ್ಥಿಗಳನ್ನ ಆಯ್ಕೆ ಮಾಡಿತ್ತು, ಆದರೆ ಅವರಿಗೆ ಅವಕಾಶ ನೀಡದೇ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಹೀಗಾಗಿ 11 ಮಂದಿಯನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ, 
ಡಿಸೆಂಬರ್ 7 ರಂದು ರಾಜಸ್ತಾನ ವಿಧಾನಸಭೆಗೆ ಚುನಾವಣೆ ನಡೆಯಲಿದೆ, ಸುರೇಂದ್ರ ಗೋಯಲ್, ಲಕ್ಷ್ಮಿ ನಾರಾಯಣ್ ದೇವ್, ಸೇರಿದಂತೆ 11 ಮಂದಿಯನ್ನು ವಜಾಗೊಳಿಸಲಾಗಿದೆ. ವಸುಂದರಾ ರಾಜೆ ಅವರಿಗೆ  ಬಿಜೆಪಿ ಭಿನ್ನಮತೀಯರು ಭಾರೀ ಪ್ರಮಾಣದಲ್ಲಿ ಮುಜುಗರ ಉಂಟು ಮಾಡಿದ್ದಾರೆ. ಭಿನ್ನಮತೀಯರು ಕೇವಲ ಬಿಜೆಪಿಯಲ್ಲಿ ಮಾತ್ರವಲ್ಲ, ಕಾಂಗ್ರೆಸ್ ನಲ್ಲೂ ಕೂಡ ಇದ್ದುಸ ಅಲ್ಲೂ ಕೂಡ ಬಂಡಾಯದ ಭಾವುಟ ಹಾರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT