ಸಂಗ್ರಹ ಚಿತ್ರ 
ದೇಶ

ಶಬರಿಮಲೆ: ಪ್ರಯಾಣ ನಿರ್ಬಂಧ ಸಡಿಲಗೊಳಿಸಿದ ಸರ್ಕಾರ, ಪಂಪಾದಲ್ಲಿ ಹೆಚ್ಚಿದ ಭಕ್ತರ ಸಂಖ್ಯೆ

ಎಲ್ಲಾ ವಯಸ್ಕ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅವಕಾಶ ನೀಡಿದ ಬಳಿಕ ಅಗ್ನಿಕುಂಡದಂತಾಗಿದ್ದ ಕೇರಳದ ಪ್ರಸಿದ್ಧ ಕ್ಷೇತ್ರ ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ಇಳಿಕೆಯಾದ ವಾರಗಳಲ್ಲೇ ಇದೀಗ ಪಂಪಾದಲ್ಲಿ...

ಪಂಪ: ಎಲ್ಲಾ ವಯಸ್ಕ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅವಕಾಶ ನೀಡಿದ ಬಳಿಕ ಅಗ್ನಿಕುಂಡದಂತಾಗಿದ್ದ ಕೇರಳದ ಪ್ರಸಿದ್ಧ ಕ್ಷೇತ್ರ ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ಇಳಿಕೆಯಾದ ವಾರಗಳಲ್ಲೇ ಇದೀಗ ಪಂಪಾದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. 
ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದಾಗಿ ಸೂಕ್ತ ವ್ಯವಸ್ಥೆಗಳು ಸಿಗದೆ ಭಕ್ತರು ಪರದಾಡುವಂತಾಗಿದೆ. ಈ ಹಿಂದೆ ಹೇಳಿಕೆ ನೀಡಿದ್ದ ಕೇರಳ ಸರ್ಕಾರ, ಶಬರಿಮಲೆಗೆ ಭಕ್ತರು ಆಗಮಿಸುತ್ತಿದ್ದಂತೆಯೇ ಎಲ್ಲಾ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಹೇಳಿತ್ತು. 
ಪ್ರಸ್ತುತ ಪಂಪಾ ಬಳಿಯಿರುವ ಮಣಪ್ಪುರಂನಲ್ಲಿ 256 ಶೌಚಾಲಯಗಳಿದ್ದು, ಪ್ರಸ್ತುತ ಭಕ್ತರ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಭಕ್ತರು ಗಂಟೆಗಟ್ಟಲೆ ಶೌಚಾಲಯಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾದೆ. ಶೌಚಾಲಯಗಳ ಮುಂದೆ ಗಂಟೆಗಟ್ಟಲೆ ನಿಲ್ಲಲು ಸಾಧ್ಯವಾಗದವರು ಸಾರ್ವಜನಿಕ ಪ್ರದೇಶಗಳಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡು ಬಂದಿದೆ. 
ಇನ್ನು ಪಂಪಾ ಸುತ್ತಮುತ್ತಲು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದು, ಇದು ಭಕ್ತಾದಿಗಳಿಗೆ ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ತ್ರಿವೇಣಿ ಸೇತುವೆಯಿಂದ ಗಣಪತಿ ದೇಗುಲದತ್ತ ಕಾಲ್ನಡಿಗೆ ಮೂಲಕ ಹೋಗುವ ಭಕ್ತಾದಿಗಳು ಧೂಳಮಯಗೊಂಡಿರುವ ಗಾಳಿಯಿಂದ ಉಸಿರಾಡುವಂತಾಗಿದೆ. 
ಆಂಧ್ರಪ್ರದೇಶದ ಚಿತ್ತೂರಿನಿಂದ ನಾವು ಬಂದಿದ್ದೇವೆ. 25 ಮಂದಿಯೊಂದಿಗೆ ನಾವು ದೇವಾಲಯಕ್ಕೆ ಬಂದಿದ್ದೇವೆ. ಆದರೆ, 1 ಗಂಟೆಯಿಂದ ಕಾಯುತ್ತಿದ್ದರೂ ಬಳಕೆ ಮಾಡಲು ಶೌಚಾಲಯಗಳು ದೊರೆಯುತ್ತಿಲ್ಲ. ಆಳವಿಲ್ಲದಿರುವುದರಿಂದ ಪಂಪಾ ನದಿಯಲ್ಲಿ ಸ್ನಾನ ಮಾಡಲು ಸಾಧ್ಯವಾಗಲಿಲ್ಲ ಎಂದು ಭಕ್ತಾದಿ ವೀರಯ್ಯ ಎಂಬುವವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT