ಮಧ್ಯಪ್ರದೇಶ ಚುನಾವಣೆ: ಬಿಜೆಪಿಗೆ ಬಾಬಾಗಳಿಂದ ಗುನ್ನಾ, ಬೆಂಬಲಿಸ್ತಾರಂತೆ ಕಾಂಗ್ರೆಸ್ ನ್ನ! 
ದೇಶ

ಮಧ್ಯಪ್ರದೇಶ ಚುನಾವಣೆ: ಬಿಜೆಪಿಗೆ ಬಾಬಾಗಳಿಂದ ಗುನ್ನಾ, ಬೆಂಬಲಿಸ್ತಾರಂತೆ ಕಾಂಗ್ರೆಸ್ ನ್ನ!

ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ರಾಜ್ಯ ಖಾತೆ ಸಚಿವ ಸ್ಥಾನ ಪಡೆದಿದ್ದ ಕಂಪ್ಯೂಟರ್ ಬಾಬ ಅಲಿಯಾಸ್ ಸ್ವಾಮಿ ನಾಮ್ ದೇವ್ ತ್ಯಾಗಿ ಈಗ ಬಿಜೆಪಿಗೆ ಕೈ ಕೊಟ್ಟಿದ್ದು ಕಾಂಗ್ರೆಸ್ ಜೊತೆ ಕೈ ಜೋಡಿಸಲು ಸಜ್ಜಾಗಿದ್ದಾರೆ.

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ರಾಜ್ಯ ಖಾತೆ ಸಚಿವ ಸ್ಥಾನ ಪಡೆದಿದ್ದ ಕಂಪ್ಯೂಟರ್ ಬಾಬ ಅಲಿಯಾಸ್ ಸ್ವಾಮಿ ನಾಮ್ ದೇವ್ ತ್ಯಾಗಿ ಈಗ ಬಿಜೆಪಿಗೆ ಕೈ ಕೊಟ್ಟಿದ್ದು ಕಾಂಗ್ರೆಸ್ ಜೊತೆ ಕೈ ಜೋಡಿಸಲು ಸಜ್ಜಾಗಿದ್ದಾರೆ. 
ಚುನಾವಣಾ ಕಣವಾಗಿರುವ ಮಧ್ಯಪ್ರದೇಶದಲ್ಲಿ ಬಾಬಾಗಳ ತಂಡವೊಂದು ಸ್ವಾಮಿ ನಾಮ್ ದೇವ್ ತ್ಯಾಗಿ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಬೆಂಬಲಿಸಲು ತೀರ್ಮಾನಿಸಿದ್ದಾರೆ.  ಇದು ಕಾಂಗ್ರೆಸ್ ಪಾಲಿಗೆ ಸಕಾರಾತ್ಮಕವಾದ ಬೆಳವಣಿಗೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ನರ್ಮದಾ ಸಂಸದ್ ನ್ನು ಸಂಘಟಿಸಿರುವ ಕಂಪ್ಯೂಟರ್ ಬಾಬ, ಸಮಾನ ಮನಸ್ಕ ಬಾಬಾಗಳನ್ನು ಉತ್ತರ ಪ್ರದೇಶ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಘಟಿಸಿದ್ದು, ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸಬೇಕೆಂಬ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಭೆಯ ಬಳಿಕ ಮಾತನಾಡಿರುವ ಕಂಪ್ಯೂಟರ್ ಬಾಬ, ಸಂತರು ಕಾಂಗ್ರೆಸ್ ನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. 15 ವರ್ಷ ಬಿಜೆಪಿಗೆ ಕೊಡಬಹುದಾದರೆ ಕಾಂಗ್ರೆಸ್ ಗೆ 5 ವರ್ಷ ಕೊಡುತ್ತೇವೆ ಎಂದು ಬಾಬಾ ಹೇಳಿದ್ದಾರೆ. ಕಾಂಗ್ರೆಸ್ ಹಿಂದೂ ಧರ್ಮವನ್ನು ಗೌರವಿಸುವುದಾದರೆ ಕಾಂಗ್ರೆಸ್ ನ್ನು ಬೆಂಬಲಿಸುತ್ತೇವೆ ಇಲ್ಲವಾದರೆ ಬೆಂಬಲ ಹಿಂಪಡೆಯುತ್ತೇವೆ ಎಂದು ಕಂಪ್ಯೂಟರ್ ಬಾಬಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT