ಅಯೋಧ್ಯೆಯಲ್ಲಿ ರಾಮಕಹಳೆ: ರಾಮ ಮಂದಿರಕ್ಕೆ ಠಾಕ್ರೆ ಭೇಟಿ, ಧರ್ಮಸಭೆಗೆ ಕ್ಷಣಗಣನೆ ಆರಂಭ 
ದೇಶ

ಅಯೋಧ್ಯೆಯಲ್ಲಿ ರಾಮಕಹಳೆ: ರಾಮ ಮಂದಿರಕ್ಕೆ ಠಾಕ್ರೆ ಭೇಟಿ, ಧರ್ಮಸಭೆಗೆ ಕ್ಷಣಗಣನೆ ಆರಂಭ

ರಾಮ ಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಹಿಂದೂಗಳು ರಾಮಕಹಳೆಯನ್ನು ಮೊಳಗಿಸುತ್ತಿದ್ದು, ಧರ್ಮಸಭೆಗೆ ಕ್ಷಣಗಣನೆ ಆರಂಭವಾಗಿದೆ...

ಅಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಹಿಂದೂಗಳು ರಾಮಕಹಳೆಯನ್ನು ಮೊಳಗಿಸುತ್ತಿದ್ದು, ಧರ್ಮಸಭೆಗೆ ಕ್ಷಣಗಣನೆ ಆರಂಭವಾಗಿದೆ. 
ಈಗಾಗಲೇ ರಾಮಮಂದಿರಕ್ಕೆ ಭೇಟಿ ನೀಡಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉದ್ಧವ್ ಠಾಕ್ರೆಯವರು ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಆಗಮಿಸಿದ್ದಾರೆ. ನಿನ್ನೆಯಷ್ಟೇ ಸರಾಯು ನದಿ ಬಳಿ ಪ್ರಾರ್ಥನೆ ಸಲ್ಲಿಸಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. 
ಕುಂಭಕರ್ಣ ರೀತಿಯ ನಿದ್ಧೆಯಿಂದ ಇನ್ನಾದರೂ ಎಚ್ಚೆತ್ತುಕೊಂಡು ಅಯೋಧ್ಯೆಯಲ್ಲಿ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣದ ದಿನಾಂಕ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು. 
ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ. ಉತ್ತರಪ್ರದೇಶದಲ್ಲೂ ಬಿಜೆಪಿ ಸರ್ಕಾರವಿದೆ. ಹೀಗಾಗಿ ಇಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಶಾಸನ ಮಾಡಬೇಕು ಅಥವಾ ಸುಗ್ರೀವಾಜ್ಞೆ ಹೊರಡಿಸೇಬೇಕೆಂದು ಒತ್ತಾಯಿಸಿದರು. 
ನೀವು ದೇವಸ್ಥಾನ ನಿರ್ಮಿಸುತ್ತೇವೆಂದು ಹೇಳುತ್ತೀರಿ. ಆದರೆ, ಯಾವಾಗ ಎಂದು ಹೇಳುತ್ತಿಲ್ಲ. ದೇವಸ್ಥಾನ ಯಾವಾಗ ನಿರ್ಮಿಸುತ್ತೀರಿ ಎಂಬುದನ್ನು ಸ್ಪಷ್ಟಪಡಿಸಿ. ಮುಂದಿನದ್ದನ್ನು ಆಮೇಲೆ ಚರ್ಚಿಸೋಣ ಎಂದು ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT