ಅಕ್ಷರಧಾಮ ದೇವಸ್ಥಾನ 
ದೇಶ

2002 ಅಕ್ಷರಧಾಮ ದಾಳಿ: ಪ್ರಮುಖ ಆರೋಪಿ ಬಂಧನ

2002ರ ಅಕ್ಷರಧಾಮ ದೇವಸ್ಥಾನದ ಮೇಲಿನ ಭಯೋತ್ಪಾದನಾ ದಾಳಿ ಪ್ರಕರಣದ ಸಂಬಂಧ ಪ್ರಮುಖ ಆರೋಪಿಯನ್ನು ಪೋಲೀಸರು ಸೋಮವಾರ ಬಂಧಿಸಿದ್ದಾರೆ.

ಅಹಮದಾಬಾದ್: 2002ರ ಅಕ್ಷರಧಾಮ ದೇವಸ್ಥಾನದ ಮೇಲಿನ ಭಯೋತ್ಪಾದನಾ ದಾಳಿ ಪ್ರಕರಣದ ಸಂಬಂಧ ಪ್ರಮುಖ ಆರೋಪಿಯನ್ನು ಪೋಲೀಸರು ಸೋಮವಾರ ಬಂಧಿಸಿದ್ದಾರೆ.
ಮಹಮ್ಮದ್ ಫಾರೂಕ್ ಶೇಖ್ ಎನ್ನುವಾತನನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅಪರಾಧ ದಳ (ಕ್ರೈಂ ಬ್ರಾಂಚ್) ಪೋಲೀಸರು ವಶಕ್ಕೆ ಪಡೆದಿದ್ದಾರೆ. ಈತ ಸೌದಿ ಅರೇಬಿಯಾದ ರಿಯಾದ್ ನಿಂದ ಅಹಮದಾಬಾದ್ ಗೆ ಬಂದಿಳಿಯುತ್ತಿದ್ದ ಹಾಕೆ ಬಂಧಿಸಲಾಗಿದೆ ಎಂದು ಪೊಲೀಸ್ ಕಮೀಶನರ್ ಭಗ್ರಿತ್ ಸಿನ್ಹ್ ಘೋಯಿಲ್ ಪಿಟಿಐಗೆ ತಿಳಿಸಿದ್ದಾರೆ.
ಇಬ್ಬರು ಶಸ್ತ್ರಧಾರಿಗಳು ಅಕ್ಷರಧಾಮ ದೇವಾಲಯದ ಮೇಲೆ  2002 ರ ಸೆಪ್ಟೆಂಬರ್ 24ರಂದು ದಾಳಿ ನಡೆಸಿದ್ದು ದಾಳಿಯಲ್ಲಿ 30 ಮಂದಿ ಸಾವನ್ನಪ್ಪಿದ್ದು ಎಂಟು ಜನ ಗಾಯಗೊಂಡಿದ್ದರು. ಗೋದ್ರಾ ದುರಂತ ಬಳಿಕ ನಡೆದ ಗಲಭೆ ನಡೆದ ವರ್ಷವೇ ಈ ದಾಳಿಯೂ ನಡೆದಿತ್ತು.
ದೇವಾಲಯದ ಮೇಲಿನ ದಾಳಿಗೆ ಶೇಖ್ ಹಣ ಸಂಚಯ ಮಾಡಿದ್ದ. ಆತ ದಾಳಿ ಬಳಿಕ 2002 ರಲ್ಲಿ ರಿಯಾದ್ ಗೆ ಪರಾರಿಯಾಗುವ ಮುನ್ನ ಜುಹಾಪುರ್ ನಲ್ಲಿ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT