ಅಕ್ಷರಧಾಮ ದೇವಸ್ಥಾನ 
ದೇಶ

2002 ಅಕ್ಷರಧಾಮ ದಾಳಿ: ಪ್ರಮುಖ ಆರೋಪಿ ಬಂಧನ

2002ರ ಅಕ್ಷರಧಾಮ ದೇವಸ್ಥಾನದ ಮೇಲಿನ ಭಯೋತ್ಪಾದನಾ ದಾಳಿ ಪ್ರಕರಣದ ಸಂಬಂಧ ಪ್ರಮುಖ ಆರೋಪಿಯನ್ನು ಪೋಲೀಸರು ಸೋಮವಾರ ಬಂಧಿಸಿದ್ದಾರೆ.

ಅಹಮದಾಬಾದ್: 2002ರ ಅಕ್ಷರಧಾಮ ದೇವಸ್ಥಾನದ ಮೇಲಿನ ಭಯೋತ್ಪಾದನಾ ದಾಳಿ ಪ್ರಕರಣದ ಸಂಬಂಧ ಪ್ರಮುಖ ಆರೋಪಿಯನ್ನು ಪೋಲೀಸರು ಸೋಮವಾರ ಬಂಧಿಸಿದ್ದಾರೆ.
ಮಹಮ್ಮದ್ ಫಾರೂಕ್ ಶೇಖ್ ಎನ್ನುವಾತನನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅಪರಾಧ ದಳ (ಕ್ರೈಂ ಬ್ರಾಂಚ್) ಪೋಲೀಸರು ವಶಕ್ಕೆ ಪಡೆದಿದ್ದಾರೆ. ಈತ ಸೌದಿ ಅರೇಬಿಯಾದ ರಿಯಾದ್ ನಿಂದ ಅಹಮದಾಬಾದ್ ಗೆ ಬಂದಿಳಿಯುತ್ತಿದ್ದ ಹಾಕೆ ಬಂಧಿಸಲಾಗಿದೆ ಎಂದು ಪೊಲೀಸ್ ಕಮೀಶನರ್ ಭಗ್ರಿತ್ ಸಿನ್ಹ್ ಘೋಯಿಲ್ ಪಿಟಿಐಗೆ ತಿಳಿಸಿದ್ದಾರೆ.
ಇಬ್ಬರು ಶಸ್ತ್ರಧಾರಿಗಳು ಅಕ್ಷರಧಾಮ ದೇವಾಲಯದ ಮೇಲೆ  2002 ರ ಸೆಪ್ಟೆಂಬರ್ 24ರಂದು ದಾಳಿ ನಡೆಸಿದ್ದು ದಾಳಿಯಲ್ಲಿ 30 ಮಂದಿ ಸಾವನ್ನಪ್ಪಿದ್ದು ಎಂಟು ಜನ ಗಾಯಗೊಂಡಿದ್ದರು. ಗೋದ್ರಾ ದುರಂತ ಬಳಿಕ ನಡೆದ ಗಲಭೆ ನಡೆದ ವರ್ಷವೇ ಈ ದಾಳಿಯೂ ನಡೆದಿತ್ತು.
ದೇವಾಲಯದ ಮೇಲಿನ ದಾಳಿಗೆ ಶೇಖ್ ಹಣ ಸಂಚಯ ಮಾಡಿದ್ದ. ಆತ ದಾಳಿ ಬಳಿಕ 2002 ರಲ್ಲಿ ರಿಯಾದ್ ಗೆ ಪರಾರಿಯಾಗುವ ಮುನ್ನ ಜುಹಾಪುರ್ ನಲ್ಲಿ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT