ಸಾಂದರ್ಭಿಕ ಚಿತ್ರ 
ದೇಶ

1 ಮತ್ತು 2ನೇ ತರಗತಿ ವಿದ್ಯಾರ್ಥಿಗಳಿಗೆ ಹೋಮ್ ವರ್ಕ್ ರದ್ದು, ಬ್ಯಾಗ್ ಭಾರ ಇಳಿಸಿದ ಹೆಚ್ ಆರ್ ಡಿ ಸಚಿವಾಲಯ

1 ಮತ್ತು 2ನೇ ತರಗತಿ ವಿದ್ಯಾರ್ಥಿಗಳಿಗೆ ಹೋಮ್ ವರ್ಕ್ ರದ್ದುಗೊಳಿಸಿ ಮತ್ತು ಶಾಲಾ ಬ್ಯಾಗ್ ಭಾರ ಇಳಿಸುವಂತೆ ನಿರ್ದೇಶಿಸಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ...

ನವದೆಹಲಿ: 1 ಮತ್ತು 2 ನೇ ತರಗತಿ ವಿದ್ಯಾರ್ಥಿಗಳಿಗೆ ಹೋಮ್ ವರ್ಕ್ ರದ್ದುಪಡಿಸಿ ಮತ್ತು  ಶಾಲಾ ಬ್ಯಾಗ್  ಭಾರ ಇಳಿಸುವಂತೆ ನಿರ್ದೇಶಿಸಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಬೋಧಿಸುವ ವಿಷಯ ಹಾಗೂ ಶಾಲಾ ಬ್ಯಾಗ್ ತೂಕದ ಕುರಿತು ಕೇಂದ್ರ ಸರ್ಕಾರದ ಸೂಚನೆಯಂತೆ ಮಾರ್ಗದರ್ಶಿ ಸೂತ್ರ ರೂಪಿಸುವಂತೆ ಹೊಸ ಆದೇಶದಲ್ಲಿ ತಿಳಿಸಲಾಗಿದೆ.  ಶಿಕ್ಷಣ ಸಂಸ್ಥೆಗಳು 1ಮತ್ತು 2ನೇ ತರಗತಿ ಮಕ್ಕಳಿಗೆ ಹೋಮ್ ವರ್ಕ್ ನೀಡುವಂತಿಲ್ಲ ಎಂದು ಸೂಚಿಸಲಾಗಿದೆ.

1 ಮತ್ತು 2ನೇ ತರಗತಿ ವಿದ್ಯಾರ್ಥಿಗಳಿಗೆ ಭಾಷೆ ಹಾಗೂ ಗಣಿತ ವಿಷಯ ಹೊರತುಪಡಿಸಿ ಉಳಿದ ಯಾವುದೇ ವಿಷಯಗಳನ್ನು ಬೋಧಿಸುವಂತಿಲ್ಲ. ಮೂರರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಎನ್ ಸಿಇಆರ್ ಟಿ ಸಲಹೆಯಂತೆ ಗಣಿತ ಹಾಗೂ ಇವಿಎಸ್ ವಿಷಯ ಬೋಧಿಸಬಹುದಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಹೆಚ್ಚುವರಿ ಪುಸ್ತಕಗಳು, ಸಲಕರಣೆಗಳನ್ನು ತರುವಂತೆ ವಿದ್ಯಾರ್ಥಿಗಳಿಗೆ ಹೇಳುವಂತಿಲ್ಲ, ಶಾಲಾ ಬ್ಯಾಗ್ ತೂಕ ನಿಗದಿಪಡಿಸಿದಕ್ಕಿಂತ ಹೆಚ್ಚಿಗೆ ಇರುವಂತಿಲ್ಲ ಆದೇಶದಲ್ಲಿ ತಿಳಿಸಲಾಗಿದೆ. 1 ಮತ್ತು 2ನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ 1.5 ಕೆಜಿ ಹಾಗೂ ಮೂರರಿಂದ ಐದನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ 2 ರಿಂದ 3 ಕೆಜಿಗಿಂತಲೂ ಹೆಚ್ಚು ತೂಕ ಇರುವಂತಿಲ್ಲ ಎಂದು ಸೂಚಿಸಲಾಗಿದೆ.
ಆರು ಮತ್ತು ಏಳನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್  ತೂಕ 4 ಕೆಜಿ ಹಾಗೂ 8 ಮತ್ತು ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ತೂಕ  4.5 ಕೆಜಿಗಿಂತ ಹೆಚ್ಚು ಇರುವಂತಿಲ್ಲ. 10ನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್  5 ಕೆಜಿಗಿಂತ ಹೆಚ್ಚು ತೂಕ ಇರಬಾರದೆಂದು ಹೊಸ ಆದೇಶದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT