26/11 ದಾಳಿ 
ದೇಶ

26/11 ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲ: ಪಾಕ್ ಗೆ ಭಾರತ ತರಾಟೆ

ಮುಂಬೈ 26/11 ದಾಳಿ ನಡೆದು ಇಂದಿಗೆ 10 ವರ್ಷ. ಆದರೆ ಮುಂಬೈ ನಲ್ಲಿ ದಾಳಿ ನಡೆಸಿದ್ದ ತನ್ನ ನೆಲದ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಕ್ಕೆ ಪಾಕಿಸ್ತಾನ ವಿಫಲವಾಗಿದೆ.

ನವದೆಹಲಿ: ಮುಂಬೈ 26/11 ದಾಳಿ ನಡೆದು ಇಂದಿಗೆ 10 ವರ್ಷ. ಆದರೆ ಮುಂಬೈ ನಲ್ಲಿ ದಾಳಿ ನಡೆಸಿದ್ದ ತನ್ನ ನೆಲದ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಕ್ಕೆ ಪಾಕಿಸ್ತಾನ ವಿಫಲವಾಗಿದೆ. ದಾಳಿ ನಡೆದು ಒಂದು ದಶಕವೇ ಕಳೆದರೂ ಕ್ರಮ ಕೈಗೊಳ್ಳುವುದರಲ್ಲಿ ವಿಫಲವಾಗಿರುವ ಪಾಕಿಸ್ತಾನದ ವಿರುದ್ಧ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
ದಾಳಿ ನಡೆದು 10 ವರ್ಷಗಳೇ ಕಳೆದರೂ ದಾಳಿಗೆ ಕಾರಣವಾದ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ದುಃಖಕರ ವಿಚಾರ. ದಾಳಿಯಲ್ಲಿ ಜೀವ ಕಳೆದುಕೊಂಡ 15 ದೇಶಗಳ 166 ಸಂತ್ರಸ್ತರ ಕುಟುಂಬ ಸದಸ್ಯರುಗಳು ನ್ಯಾಯಕ್ಕಾಗಿ ಇಂದಿಗೂ ಎದುರು ನೋಡುತ್ತಿದ್ದಾರೆ.  ಆದರೆ ದಾಳಿ ಮಾಡಿದವರ ವಿರುದ್ಧ ಪಾಕಿಸ್ತಾನ ಕೈಗೊಳ್ಳುವುದಕ್ಕೆ ವಿಫಲವಾಗಿದ್ದು, ದಾಳಿ ನಡೆಸಲು ಸಂಚು ರೂಪಿಸಿದವರು ಇಂದಿಗೂ ಪಾಕಿಸ್ತಾನದಲ್ಲಿ ನಿರ್ಭಯದಿಂದ ತಿರುಗುತ್ತಿದ್ದಾರೆ  ಎಂದು ವಿದೇಶಾಂಗ ಇಲಾಖೆ  ಹೇಳಿದೆ. 
26/11 ದಾಳಿ ಪಾಕಿಸ್ತಾನದ ನೆಲದಿಂದಲೇ ಸಂಚು ರೂಪಿಸಿ ನಡೆಸಲಾಗಿದ್ದ ದಾಳಿಯಾಗಿದೆ. ವರ್ಷದ ಪ್ರಾರಂಭದಲ್ಲಿ 26/11 ರ ದಾಳಿಕೋರರು ಪಾಕಿಸ್ತಾನಕ್ಕೇ ಸೇರಿದವರೆಂದು ಒಪ್ಪಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪಾಕಿಸ್ತಾನ ದ್ವಂದ್ವ ನೀತಿಯನ್ನು  ಕೈಬಿಡಬೇಕೆಂದು ಮತ್ತೊಮ್ಮೆ ಕರೆ ನೀಡುತ್ತೇವೆ ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT