26/11 ದಾಳಿ 
ದೇಶ

26/11 ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲ: ಪಾಕ್ ಗೆ ಭಾರತ ತರಾಟೆ

ಮುಂಬೈ 26/11 ದಾಳಿ ನಡೆದು ಇಂದಿಗೆ 10 ವರ್ಷ. ಆದರೆ ಮುಂಬೈ ನಲ್ಲಿ ದಾಳಿ ನಡೆಸಿದ್ದ ತನ್ನ ನೆಲದ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಕ್ಕೆ ಪಾಕಿಸ್ತಾನ ವಿಫಲವಾಗಿದೆ.

ನವದೆಹಲಿ: ಮುಂಬೈ 26/11 ದಾಳಿ ನಡೆದು ಇಂದಿಗೆ 10 ವರ್ಷ. ಆದರೆ ಮುಂಬೈ ನಲ್ಲಿ ದಾಳಿ ನಡೆಸಿದ್ದ ತನ್ನ ನೆಲದ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಕ್ಕೆ ಪಾಕಿಸ್ತಾನ ವಿಫಲವಾಗಿದೆ. ದಾಳಿ ನಡೆದು ಒಂದು ದಶಕವೇ ಕಳೆದರೂ ಕ್ರಮ ಕೈಗೊಳ್ಳುವುದರಲ್ಲಿ ವಿಫಲವಾಗಿರುವ ಪಾಕಿಸ್ತಾನದ ವಿರುದ್ಧ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
ದಾಳಿ ನಡೆದು 10 ವರ್ಷಗಳೇ ಕಳೆದರೂ ದಾಳಿಗೆ ಕಾರಣವಾದ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ದುಃಖಕರ ವಿಚಾರ. ದಾಳಿಯಲ್ಲಿ ಜೀವ ಕಳೆದುಕೊಂಡ 15 ದೇಶಗಳ 166 ಸಂತ್ರಸ್ತರ ಕುಟುಂಬ ಸದಸ್ಯರುಗಳು ನ್ಯಾಯಕ್ಕಾಗಿ ಇಂದಿಗೂ ಎದುರು ನೋಡುತ್ತಿದ್ದಾರೆ.  ಆದರೆ ದಾಳಿ ಮಾಡಿದವರ ವಿರುದ್ಧ ಪಾಕಿಸ್ತಾನ ಕೈಗೊಳ್ಳುವುದಕ್ಕೆ ವಿಫಲವಾಗಿದ್ದು, ದಾಳಿ ನಡೆಸಲು ಸಂಚು ರೂಪಿಸಿದವರು ಇಂದಿಗೂ ಪಾಕಿಸ್ತಾನದಲ್ಲಿ ನಿರ್ಭಯದಿಂದ ತಿರುಗುತ್ತಿದ್ದಾರೆ  ಎಂದು ವಿದೇಶಾಂಗ ಇಲಾಖೆ  ಹೇಳಿದೆ. 
26/11 ದಾಳಿ ಪಾಕಿಸ್ತಾನದ ನೆಲದಿಂದಲೇ ಸಂಚು ರೂಪಿಸಿ ನಡೆಸಲಾಗಿದ್ದ ದಾಳಿಯಾಗಿದೆ. ವರ್ಷದ ಪ್ರಾರಂಭದಲ್ಲಿ 26/11 ರ ದಾಳಿಕೋರರು ಪಾಕಿಸ್ತಾನಕ್ಕೇ ಸೇರಿದವರೆಂದು ಒಪ್ಪಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪಾಕಿಸ್ತಾನ ದ್ವಂದ್ವ ನೀತಿಯನ್ನು  ಕೈಬಿಡಬೇಕೆಂದು ಮತ್ತೊಮ್ಮೆ ಕರೆ ನೀಡುತ್ತೇವೆ ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT