Passport available for Rs 250 in Chandni Chowk: Subramanian Swamy calls Kartarpur corridor dangerous 
ದೇಶ

ಕರ್ತಾರ್ ಪುರ ಕಾರಿಡಾರ್ ನ್ನು ಸುಬ್ರಹ್ಮಣಿಯನ್ ಸ್ವಾಮಿ ಅಪಾಯಕಾರಿ ಅಂದಿದ್ದೇಕೆ?: ಇಲ್ಲಿದೆ ಮಾಹಿತಿ

ಕರ್ತಾರ್ಪುರ ಕಾರಿಡಾರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರ ಸರ್ಕಾರದ ನಡೆಯನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ವಿರೋಧಿಸಿದ್ದಾರೆ.

ನವದೆಹಲಿ: ಕರ್ತಾರ್ಪುರ ಕಾರಿಡಾರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರ ಸರ್ಕಾರದ  ನಡೆಯನ್ನು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ವಿರೋಧಿಸಿದ್ದಾರೆ. 
ಕಾರಿಡಾರ್ ನಿರ್ಮಾಣವಾದರೂ ಸಹ ಪಾಕಿಸ್ತಾನದ ಜನ ಭಾರತಕ್ಕೆ ಬರುವುದಕ್ಕೆ ಅವಕಾಶ ನೀಡಬಾರದು ಎಂದು ಸುಬ್ರಹ್ಮಣಿಯನ್ ಸ್ವಾಮಿ ಸಲಹೆ ನೀಡಿದ್ದು, ಕರ್ತಾರ್ ಪುರ ಕಾರಿಡಾರ್ ನ್ನು ತೆರೆಯುವುದು ಅಪಾಯಕಾರಿ ನಡೆ ಎಂದು ವಿಶ್ಲೇಷಿಸಿದ್ದಾರೆ. 
ಸರಿಯಾಗಿ ನಿಗಾ ವಹಿಸದೇ ಇದ್ದರೆ ಕರ್ತಾರ್ ಪುರ ಕಾರಿಡಾರ್ ಅಪಾಯಕ್ಕೆ ಆಹ್ವಾನ ನೀಡಿದಂತೆ, ಅದನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿರುವ ಸುಬ್ರಹ್ಮಣಿಯನ್ ಸ್ವಾಮಿ,  ಕೇವಲ ಪಾಸ್ಪೋರ್ಟ್ ನ್ನು ತೋರಿಸುವುದು ಸೂಕ್ತ ಎಚ್ಚರಿಕೆ ಕ್ರಮ ಎಂದು ಅನಿಸುವುದಿಲ್ಲ ಚಾಂದ್ನಿ ಚೌಕ್ ನಲ್ಲಿ 250 ರೂಪಾಯಿಗಳಿಗೆ ಸಿಗುತ್ತದೆ. ಪಾಕಿಸ್ತಾನದವರು ಇಲ್ಲಿಗೆ ಬರುವುದಕ್ಕೆ ಅವಕಾಶ ನೀಡಬಾರದು ಎಂದು ಸ್ವಾಮಿ ಹೇಳಿದ್ದಾರೆ. 
ಇದೇ ವೇಳೆ ಕರ್ತಾರ್ ಪುರ್ ಕಾರಿಡಾರ್ ಗೆ ಪಾಕ್ ನಲ್ಲಿ ಶಿಲಾನ್ಯಾಸ ನೆರವೇರಿಸ ಕಾರ್ಯಕ್ರಮಕ್ಕೆ ಭಾರತದ ಯಾವೊಬ್ಬ ಸಚಿವನೂ ಸಹ ಆಹ್ವಾನವನ್ನು ಒಪ್ಪಿಕೊಳ್ಳಬಾರದು ಎಂದು ಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT