ಪಾಕಿಸ್ತಾನ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಪಂಜಾಬ್ ಸಿಎಂ 
ದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಪಂಜಾಬ್ ಸಿಎಂ

ಪಾಕಿಸ್ತಾನ ಕದನವಿರಾಮ ಉಲ್ಲಂಘನೆ ಮಾಡುತ್ತಿರುವುದರ ಕುರಿತು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ

ಗುರ್ದಾಸ್ ಪುರ: ಪಾಕಿಸ್ತಾನ ಕದನವಿರಾಮ ಉಲ್ಲಂಘನೆ ಮಾಡುತ್ತಿರುವುದರ ಕುರಿತು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ. 
ಕರ್ತಾರ್ ಪುರ ಕಾರಿಡಾರ್ ಗೆ ಶಿಲನ್ಯಾಸ  ನೆರವೇರಿಸಿದ ನಂತರ ಪಾಕ್ ನ ಸೇನಾ ಮುಖ್ಯಸ್ಥರನ್ನು ಪ್ರಶ್ನಿಸಿರುವ ಅಮರಿಂದರ್ ಸಿಂಗ್ "ನಿಮಗೆ ನಾನು ಎಚ್ಚರಿಕೆ ನೀಡುತ್ತಿದ್ದೆನೆ, ನಾವೂ ಕೂಡಾ ಪಂಜಾಬಿಗಳೇ, ನೀವು ಭಾರತವನ್ನು ಪ್ರವೇಶಿಸುವುದಕ್ಕಾಗಲೀ ಇಲ್ಲಿನ ವಾತಾವರಣ ಹದಗೆಡಿಸುವುದಕ್ಕಾಗಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. 
ಕದನ ವಿರಾಮ ಉಲ್ಲಂಘನೆ ಹೇಡಿಗಳ ಲಕ್ಷಣ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಕದನ ವಿರಾಮ ಉಲ್ಲಂಘನೆ ಮಾಡಿ ಎದುರಾಳಿ ಸೈನಿಕರನ್ನು ಹತ್ಯೆ ಮಾಡಲು ಯಾವ ಸೇನೆ ಹೇಳಿಕೊಡುತ್ತದೆ? ಪಠಾಣ್ ಕೋಟ್ ಹಾಗೂ ಅಮೃತ್ ಸರಕ್ಕೆ ದಾಳಿ ನಡೆಸಲು ಜನರನ್ನು ಕಳಿಸುವುದನ್ನು ಯಾವ ಸೇನೆ ಹೇಳಿಕೊಡುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕರ್ತಾರ್ ಪುರ ಕಾರಿಡಾರ್ ಗೆ ಪಾಕಿಸ್ತಾನದಲ್ಲಿ ನ.28 ರಂದು ಶಿಲನ್ಯಾಸ ನೆರವೇರಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಪಾಕ್ ಸರ್ಕಾರ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರನ್ನೂ ಆಹ್ವಾನಿಸಿತ್ತು. ಆದರೆ ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯ ಕಾರಣ ನೀಡಿದ್ದ ಅಮರಿಂದರ್ ಸಿಂಗ್ ಪಾಕ್ ಆಹ್ವಾನವನ್ನು ನಿರಾಕರಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT