ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ 
ದೇಶ

ದೇಶದ ಪ್ರಧಾನಿಯಾದವರು ಸಂಯಮದಿಂದ ವರ್ತಿಸಬೇಕು: ಮೋದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ

ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಭೇಟಿ ನೀಡುವಾಗ ಪ್ರಧಾನಿ ನರೇಂದ್ರ ಮೋದಿ ಸಂಯಮ ...

ನವದೆಹಲಿ: ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಭೇಟಿ ನೀಡುವಾಗ ಪ್ರಧಾನಿ ನರೇಂದ್ರ ಮೋದಿ ಸಂಯಮ ತೋರಿಸಬೇಕು, ದೇಶದ ಪ್ರಧಾನಿಯಾಗಿ ತಮ್ಮ ಗುಣನಡತೆಗಳಿಂದ ಮಾದರಿಯಾಗಿರಬೇಕು ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ.

ಕೇಂದ್ರದ ಮಾಜಿ ಸಚಿವ ಮನೀಶ್ ತಿವಾರಿ ಬರೆದಿರುವ ಫೇಬಲ್ಸ್ ಆಫ್ ಫ್ರಾಕ್ಚರ್ಡ್ ಟೈಮ್ಸ್ ಪುಸ್ತಕವನ್ನು ದೆಹಲಿಯಲ್ಲಿ ನಿನ್ನೆ ಬಿಡುಗಡೆ ಮಾಡಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾಗಿ ಕೆಲವು ಜವಾಬ್ದಾರಿಗಳನ್ನು ಪಾಲಿಸಬೇಕು ಎಂದು ಅವರಿಗೆ ಸಲಹೆ ನೀಡಲು ಬಯಸುತ್ತೇನೆ ಎಂದರು.

ಬಿಜೆಪಿ ಅಧಿಕಾರವಿರುವ ರಾಜ್ಯಗಳಿಗೆ ಹೋದಾಗ ಅವರ ವರ್ತನೆ ಬೇರೆಯದ್ದೇ ರೀತಿ ಇರುತ್ತದೆ. ಅಲ್ಲಿನ ಮುಖ್ಯಮಂತ್ರಿಗಳ ಜೊತೆ ಉತ್ತಮ ಬಾಂಧವ್ಯದಿಂದ ನಡೆದುಕೊಳ್ಳುತ್ತಾರೆ. ಅದೇ ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಹೋದಾಗ ಅಲ್ಲಿ ಸಂಯಮ ತೋರಿಸುವುದಿಲ್ಲ. ಅಲ್ಲಿ ಮಾತನಾಡುವಾಗ ದೇಶದ ನಾಯಕರಾಗಿ ಬಳಸಬಾರದ ಭಾಷೆಗಳನ್ನು ಬಳಸುತ್ತಾರೆ, ಅದು ಅವರಿಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಟೀಕಿಸಿದರು.

ದೇಶದ ಪ್ರಧಾನಿಯಾದವರು ಇತರರಿಗೆ ಮಾದರಿಯಾಗಿರಬೇಕು. ಅವರು ದೇಶದ ನಾಗರಿಕರಿಗೆ ಪ್ರಧಾನ ಮಂತ್ರಿ, ಅವರ ವರ್ತನೆ, ನಡತೆಗಳು ಮೌಲ್ಯಯುತವಾಗಿರಬೇಕು ಮತ್ತು ಅದು ಯಾವತ್ತೂ ಸ್ಥಿರವಾಗಿರಬೇಕು, ಆ ರೀತಿ ಇದ್ದರೆ ಮಾತ್ರ ಪ್ರಧಾನಿಯಾಗಲು ಸಾಧ್ಯ ಎಂದು ನೆರೆದ ಜನಸಮೂಹವನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದರು.

ಯುಪಿಎ ಆಡಳಿತ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ರಾಜ್ಯಗಳಿಗೆ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರಲಿಲ್ಲ. ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೇಕಾದರೆ ಕೇಳಿ, ಅವರೇ ನನ್ನ ಮಾತನ್ನು ಒಪ್ಪುತ್ತಾರೆ ಎಂದರು.

ಭಾರತಕ್ಕೆ ಮೋದಿಯವರು ಪ್ರಧಾನ ಮಂತ್ರಿಯಾಗಿದ್ದು ಈ ದೇಶದ ದುರಂತ ಎಂದು ಮನಮೋಹನ್ ಸಿಂಗ್ ಈ ಹಿಂದೆ ಟೀಕಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ; ಜಿ ಪರಮೇಶ್ವರ ಪ್ರತಿಕ್ರಿಯೆ ಏನು? Video

SCROLL FOR NEXT