ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಕರ್ತಾರ್ಪುರ ಕಾರಿಡಾರ್ ಓಕೆ, ಭಯೋತ್ಪಾದನೆ ಅಂತ್ಯಗೊಂಡರೆ ಮಾತ್ರ ಪಾಕ್ ಜೊತೆ ಮಾತುಕತೆ: ಸುಷ್ಮಾ ಸ್ವರಾಜ್

ಕರ್ತಾರ್ಪುರ ಕಾರಿಡಾರ್ ಯೋಜನೆಯ ವಿಚಾರವನ್ನು ಎರಡು ರಾಷ್ಟ್ರಗಳ ಮಾತುಕತೆಗಳೊಂದಿಗೆ ಹೋಲಿಕೆ ಮಾಡಬಾರದು. ಭಾರತದ ವಿರುದ್ಧ ಭಯೋತ್ಪಾದನೆ ಅಂತ್ಯಗೊಂಡರೆ ಮಾತ್ರ ಉಭಯ ರಾಷ್ಟ್ರಗಳೊಂದಿಗೆ...

ನವದೆಹಲಿ: ಕರ್ತಾರ್ಪುರ ಕಾರಿಡಾರ್ ಯೋಜನೆಯ ವಿಚಾರವನ್ನು ಎರಡು ರಾಷ್ಟ್ರಗಳ ಮಾತುಕತೆಗಳೊಂದಿಗೆ ಹೋಲಿಕೆ ಮಾಡಬಾರದು. ಭಾರತದ ವಿರುದ್ಧ ಭಯೋತ್ಪಾದನೆ ಅಂತ್ಯಗೊಂಡರೆ ಮಾತ್ರ ಉಭಯ ರಾಷ್ಟ್ರಗಳೊಂದಿಗೆ ಮಾತುಕತೆ ಸಾಧ್ಯ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ದ್ವಿಪಕ್ಷೀಯ ಮಾತುಕತೆ, ಕರ್ತಾರ್ಪುರ ಕಾರಿಡಾರ್ ಯೋಜನೆ ಪ್ರತ್ಯೇಕ ವಿಚಾರಗಳಾಗಿವೆ. ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದಲೂ ಕರ್ತಾರ್ಪುರ ಕಾರಿಡಾರ್ ಯೋಜನೆಗಾಗಿ ಪಾಕಿಸ್ತಾನ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಲೇ ಇತ್ತು. ಆದರೆ, ಇದೇ ಮೊದಲ ಬಾರಿಗೆ ಪಾಕಿಸ್ತಾನ ಸಕಾರಾತ್ಮಕ ಸ್ಪಂದನೆ ನೀಡಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. 
ಆದರೆ, ಕರ್ತಾರ್ಪುರ ಕಾರಿಡಾರ್ ಯೋಜನೆಯಿಂದ ಎರಡು ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯುವುದಿಲ್ಲ. ಭಯೋತ್ಪಾದನೆ, ದ್ವಿಪಕ್ಷೀಯ ಮಾತುಕತೆ ಎರಡೂ ಒಂದೆಡೆ ಸಾಗಲು ಸಾಧ್ಯವಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳನ್ನು ನಿಲ್ಲಿಸಿದಾಗ ಮಾತ್ರ, ಉಭಯ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಮಾತುಕತೆಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT