ಸಂಗ್ರಹ ಚಿತ್ರ 
ದೇಶ

ಶಬರಿಮಲೆ ಪ್ರತಿಭಟನೆಯ ವೇದಿಕೆ ಅಲ್ಲ, ಇನ್ನಾವುದೇ ರೀತಿಯ ಪ್ರತಿಭಟನೆ ನಡೆಯಬಾರದು: ಕೇರಳ ಹೈಕೋರ್ಟ್

ಶಬರಿಮಲೆ ಪ್ರತಿಭಟನೆಯ ವೇದಿಕೆ ಅಲ್ಲ, ಇನ್ನಾವುದೇ ರೀತಿಯ ಪ್ರತಿಭಟನೆ ನಡೆಯಬಾರದು ಎಂದು ಕೇರಳ ಹೈಕೋರ್ಟ್ ಕಿಡಿಕಾರಿದೆ.

ತಿರುವನಂತಪುರ: ಶಬರಿಮಲೆ ಪ್ರತಿಭಟನೆಯ ವೇದಿಕೆ ಅಲ್ಲ, ಇನ್ನಾವುದೇ ರೀತಿಯ ಪ್ರತಿಭಟನೆ ನಡೆಯಬಾರದು ಎಂದು ಕೇರಳ ಹೈಕೋರ್ಟ್ ಕಿಡಿಕಾರಿದೆ.
ಶಬರಿಮಲೆ ದೇಗುಲಕ್ಕೆ 10ರಿಂದ 50ರೊಳಗಿನ ಮಹಿಳೆಯರ ಪ್ರವೇಶ ಕುರಿತಂತೆ ಗಲಭೆಗೆ ಸಾಕ್ಷಿಯಾಗಿತ್ತು. ಈ ಘಟನೆ ಹಿನ್ನಲೆಯಲ್ಲಿ ಇಂದು ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಜಿಲ್ಲಾಡಳಿತವನ್ನು ಕೇರಳ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅಯ್ಯಪ್ಪ ದೇಗುಲ ಪ್ರತಿಭಟನೆಯ ತಾಣವಲ್ಲ ಎಂದು ಕಿಡಿಕಾರಿದೆ.
'ಅಯ್ಯಪ್ಪನ ದೇಗುಲ ಪ್ರತಿಭಟನೆಯ ತಾಣವಲ್ಲ. ಅಲ್ಲಿ ಇಂತಹ ಚಟುವಟಿಕೆಗಳು ನಡೆಯಬಾರದು ಎಂದು ಕೋರ್ಟ್ ಹೇಳಿದೆ. ಅಂತೆಯೇ ದೇಗುಲದ ಬಳಿ ಪೊಲೀಸರು ಹೇರಿರುವ ನಿರ್ಬಂಧದ ಬಗ್ಗೆಯೂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಡಲ-ಮಕರವಿಳಕ್ಕು ಹಬ್ಬದ ವೇಳೆ ನಿಗಾ ಇಡಲು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿ.ಆರ್​. ರಾಮನ್ ಹಾಗೂ ಸಿರಿ ಜಗನ್​, ಹಿರಿಯ ಐಪಿಎಸ್​ ಅಧಿಕಾರಿ ಎ. ಹೇಮಚಂದ್ರನ್​ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿದೆ. ನೀಳಕ್ಕಲ್​ ಹಾಗೂ ಸನ್ನಿಧಾನಂ ಬಸ್​ ಸಂಚಾರದ ಮೇಲೆ ಪೊಲೀಸರು ಹೇರಿರುವ ನಿರ್ಬಂಧಗಳನ್ನು ತೆಗೆದು ಹಾಕುವಂತೆಯೂ ಕೋರ್ಟ್ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT