ಸಂಗ್ರಹ ಚಿತ್ರ 
ದೇಶ

ವಿಗ್ರಹ ನಿರ್ಮಾಣಕ್ಕೇ ಲಾಯಕ್ಕು, ರಾಮ ಮಂದಿರ ನಿರ್ಮಾಣಕ್ಕಲ್ಲ: ಸರ್ಕಾರದ ವಿರುದ್ಧ ಸ್ವಾಮಿಜೀಗಳ ಆಕ್ರೋಶ

ಹಾಲಿ ಸರ್ಕಾರ ಕೇವಲ ವಿಗ್ರಹ ನಿರ್ಮಾಣಕ್ಕೇ ಲಾಯಕ್ಕು, ರಾಮ ಮಂದಿರ ನಿರ್ಮಾಣಕ್ಕಲ್ಲ ಎಂದು ಪರಮ ಧರ್ಮ ಸಂಸದ್ ಆಕ್ರೋಶ ವ್ಯಕ್ತಪಡಿಸಿದೆ.

ನವದೆಹಲಿ: ಹಾಲಿ ಸರ್ಕಾರ ಕೇವಲ ವಿಗ್ರಹ ನಿರ್ಮಾಣಕ್ಕೇ ಲಾಯಕ್ಕು, ರಾಮ ಮಂದಿರ ನಿರ್ಮಾಣಕ್ಕಲ್ಲ ಎಂದು ಪರಮ ಧರ್ಮ ಸಂಸದ್ ಆಕ್ರೋಶ ವ್ಯಕ್ತಪಡಿಸಿದೆ.
ಅಯೋಧ್ಯೆಯಲ್ಲಿ 221 ಮೀಟರ್ ಎತ್ತರದ ಬೃಹತ್ ರಾಮನ ವಿಗ್ರಹ ನಿರ್ಮಾಣ ಸಂಬಂಧ ಕಳೆದ ನವೆಂಬರ್ 2ರಂದು ನಡೆದ ವಿಶ್ವ ಹಿಂದೂ ಪರಿಷತ್ ಸಭೆಯನ್ನು ರಾಜಕೀಯ ನಾಟಕ ಎಂದು ಕರೆದಿರುವ ದೇಶದ ಪ್ರಮುಖ ಮಠಾಧೀಶರ ಒಕ್ಕೂಟ ಪರಮ ಧರ್ಮ ಸಂಸದ್, ಹಾಲಿ ಸರ್ಕಾರ ಕೇವಲ ವಿಗ್ರಹಗಳನ್ನು ನಿರ್ಮಾಣ ಮಾಡುವುದಕ್ಕಷ್ಟೇ ಲಾಯಕ್ಕು, ರಾಮಮಂದಿರ ನಿರ್ಮಾಣಕ್ಕಲ್ಲ ಎಂದು ಕಿಡಿಕಾರಿದೆ.
ಅಂತೆಯೇ ಯಾರೇ ಆಗಲಿ ಶ್ರೀರಾಮನನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಬಾರದು.  ಬಿಜೆಪಿ ಸರ್ಕಾರದ ಮೇಲೆ ನಮಗೆ ಸಾಕಷ್ಟು ಭರವಸೆ ಇತ್ತು. ಕ್ರಮೇಣ ಅದು ಕಡಿಮೆಯಾಗುತ್ತಿದ್ದು, ಈ ಸರ್ಕಾರ ಕೇವಲ ವಿಗ್ರಹಗಳನ್ನು ನಿರ್ಮಾಣ ಮಾಡುವುದಕ್ಕಷ್ಟೇ ಲಾಯಕ್ಕು, ರಾಮಮಂದಿರ ನಿರ್ಮಾಣಕ್ಕಲ್ಲ ಎಂದು ಸಂಸದ್ ನ ದ್ವಾರಕಾ-ಶಾರದಾ ಮತ್ತು ಜ್ಯೋತಿಶ್ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಹೇಳಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ರಾಮನ ವಿಗ್ರಹ ನಿರ್ಮಾಣ ಯೋಜನೆಯನ್ನು ವಿರೋಧಿಸಿದ ಅವರು, ಶ್ರೀರಾಮನ ವಿಗ್ರಹಕ್ಕಿಂತ ಮೊದಲು ರಾಮಮಂದಿರ ನಿರ್ಮಾಣವಾಗಬೇಕು. ಇದು ಎಲ್ಲ ಹಿಂದೂಗಳ ದಶಕಗಳ ಆಸೆಯಾಗಿದೆ ಎಂದು ಹೇಳಿದರು.
1992ರಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು. ಅಲ್ಲದೆ ಸಾಕ್ಷಿ ಸಮೇತ ಅದು ರಾಮಮಂದಿರ.. ಮಸೀದಿ ಅಲ್ಲ ಎಂದು ಸಾಬೀತು ಪಡಿಸಲಾಗಿತ್ತು. ಅಲ್ಲದೆ ಅದು ಹಿಂದಿನಿಂದಲೂ ಮಸೀದಿಯಾಗಿತ್ತು ಎಂಬ ವಾದಕ್ಕೆ ಪುಷ್ಠಿ ನೀಡುವ ಯಾವುದೇ ರೀತಿಯ ಪುರಾವೆ ಮುಸ್ಲಿಮರ ಬಳಿ ಇಲ್ಲ. ಹೀಗಿದ್ದೂ ಸರ್ಕಾರ ರಾಮಮಂದಿರ ನಿರ್ಮಾಣಕ್ಕೆ ಮೀನಾಮೇಷ ಎಣಿಸುತ್ತಿದೆ. ಇದು ಸರಿಯಲ್ಲ. ಯಾವುದೇ ರಾಜಕೀಯ ಪಕ್ಷಗಳಿಂದಲೂ ರಾಮಮಂದಿರ ನಿರ್ಮಾಣ ಸಾಧ್ಯವಾಗಿಲ್ಲ. ಆದರೆ ರಾಮಮಂದಿರ ನಿರ್ಮಾಣದ ಹೆಸರಲ್ಲಿ ಹಿಂದೂಗಳ ಭಾವನೆಗಳೊಂದಿಗೆ ಆಟವಾಡಿ ತಮ್ಮ ಮತ ಪೆಟ್ಟಿಗೆಯನ್ನು ತುಂಬಿಸಿಕೊಳ್ಳುತ್ತಿವೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT