ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ 
ದೇಶ

ಅಮಿತ್ ಶಾ ಇಷ್ಟವೋ,ಇಲ್ಲವೋ ಗೊತ್ತಿಲ್ಲ, ಬೀಫ್ ಬಿರಿಯಾನಿ ಕಳುಹಿಸುವಂತೆ ಕೆಸಿಆರ್'ಗೆ ಹೇಳುತ್ತೇನೆ: ಓವೈಸಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಷ್ಟ ಪಡುತ್ತಾರೋ, ಇಲ್ಲವೋ ಗೊತ್ತಿಲ್ಲ. ಬೇಕಿದ್ದರೆ, ಅಮಿತ್ ಶಾ ಅವರಿಗೆ ಬಿರಿಯಾನಿ ಕಳುಹಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಹೇಳುತ್ತೇನೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ...

ಹೈದರಾಬಾದ್: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಷ್ಟ ಪಡುತ್ತಾರೋ, ಇಲ್ಲವೋ ಗೊತ್ತಿಲ್ಲ. ಬೇಕಿದ್ದರೆ, ಅಮಿತ್ ಶಾ ಅವರಿಗೆ ಬಿರಿಯಾನಿ ಕಳುಹಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಹೇಳುತ್ತೇನೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. 
ತೆಲಂಗಾಣ ರಾಜ್ಯದಲ್ಲಿ ಮುಸ್ಲಿಮರಿಗೆ ಚಂದ್ರಶೇಖರ್ ರಾವ್ ಅವರು ಬಿರಿಯಾನಿ ನೀಡಿದ್ದರು. ಇದಕ್ಕೆ ಅಮಿತ್ ಶಾ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 
ಇದಕ್ಕೆ ವ್ಯಂಗ್ಯವಾಡಿರುವ ಓವೈಸಿಯವರು, ಬೇಕಿದ್ದರೆ, ಅಮಿತ್ ಶಾ ಅವರಿಗೆ ಬೀಫ್ ಬಿರಿಯಾನಿ ಕಳುಹಿಸರು ಕೆಸಿಆರ್ ಅವರಿಗೆ ಶಿಫಾರಸು ಮಾಡುತ್ತೇನೆಂದು ಹೇಳಿದ್ದಾರೆ. 
ಯಾರೋ ಬಿರಿಯಾನಿ ತಿಂದರೆ, ಅಮಿತ್ ಶಾಗೇಕೆ ಹೊಟ್ಟೆ ಕಿಚ್ಚು? ಶಾ ಅವರಿಗೂ ಬಿರಿಯಾನಿ ಇಷ್ಟ ಎಂದು ನನಗೆ ಗೊತ್ತಿರಲಿಲ್ಲ. ನಿಮಗೆ ಕೊಟ್ಟಿಲ್ಲವೆಂದು ಬೇಸರವಿದ್ದರೆ, ನಿಮಗೂ ಬೀಫ್ ಬಿರಿಯಾನಿ ಕಳುಹಿಸಿಕೊಡುತ್ತೇವೆ, ನೀವೂ ತಿನ್ನಿ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಮೋದಿಯವರಿಗೆ ಟಾಂಗ್ ನೀಡಿರುವ ಓವೈಸಿ, ಆಹ್ವಾನವೇ ಇಲ್ಲದಿದ್ದರು ಮೋದಿ ಪಾಕಿಸ್ತಾನಕ್ಕೆ ತೆರಳಿ, ಷರೀಫ್ ಅವರ ಮಗಳು ಮದುವೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ಅವರಿಗೆ ತಿನ್ನಲು ಏನು ಕೊಟ್ಟರು? ಅಲ್ಲಿ ಮೋದಿಯವರಿಗೆ ಎಂತಹ ಆಹಾರ ಕೊಟ್ಟಿದ್ದರೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT