ಅಮರ್ ಸಿಂಗ್ 
ದೇಶ

ಎಸ್ಪಿ ಮಾಜಿ ನಾಯಕ ಅಮರ್ ಸಿಂಗ್ ರಿಂದ ಆರ್ ಎಸ್ ಎಸ್ ಗೆ ಕೋಟ್ಯಂತರ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ದಾನ!

ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ತನ್ನ ಕೋಟ್ಯಂತರ ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಅಜಂಗಢದ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಸೇರಿದ ಸೇವಾ ಭಾರತ ಸಂಸ್ಥೆಗೆ ದಾನ ಮಾಡಿದ್ದಾರೆ.

ಲಖನೌ:  ಸಮಾಜವಾದಿ ಪಕ್ಷದ ಮಾಜಿ ನಾಯಕ  ಅಮರ್ ಸಿಂಗ್  ತನ್ನ ಕೋಟ್ಯಂತರ ರೂ.ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಅಜಂಗಢದ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಸೇರಿದ ಸೇವಾ ಭಾರತ ಸಂಸ್ಥೆಗೆ ದಾನ ಮಾಡಿದ್ದಾರೆ.

ಎಸ್ಪಿ ಪಕ್ಷದ ಮಾಜಿ ಕಾರ್ಯದರ್ಶಿ ಅಮರ್ ಸಿಂಗ್  ಅಜಂಗಢದ ತರ್ವಾನ್ ಬಳಿಯಲ್ಲಿನ 10 ಕೋಟಿ. ರೂ. ಮೌಲ್ಯದ  ಭೂಮಿ, 4 ಕೋಟಿ ಮೌಲ್ಯದ ಪೂರ್ವಜರ  ಕಾಲದ ಮನೆ ಸೇರಿದಂತೆ  15 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಸೇವಾ ಭಾರತಿ ಸಂಸ್ಥೆಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

 ಆರ್ ಎಸ್ ಎಸ್ ಮೂಲಕ ಬಿಜೆಪಿಗೆ ಸೇರಿಕೊಳ್ಳಲು ಅಮರ್ ಸಿಂಗ್ ದಾರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ  ಪ್ರತಿಕ್ರಿಯಿಸುವುದಿಲ್ಲ ಎಂದಿರುವ ಅಮರ್ ಸಿಂಗ್ , ಸಮಾಜ ಸೇವೆ  ಹಾಗೂ ತಮ್ಮ ಪೂರ್ವಜರ ನೆನಪಿನಲ್ಲಿ ಆಸ್ತಿ ದಾನ ಮಾಡಿರುವುದಾಗಿ  ಹೇಳಿದ್ದಾರೆ.

 ಅಜಂಗಡದ ಅಮರ್ ಸಿಂಗ್, ಮುಲಾಯಂ ಸಿಂಗ್ ಅವಧಿಯಲ್ಲಿ  ಜಿಲ್ಲೆಯ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2010ರಲ್ಲಿ ಎಸ್ಪಿಯಿಂದ ಹೊರಬಂದು ಅಮರ್ ಸಿಂಗ್ ರಾಷ್ಟ್ರೀಯ ಲೋಕ ಮಂಚ್ ಎಂಬ ಹೆಸರಿನಲ್ಲಿ ಪುರ್ವಾಂಚಲಕ್ಕಾಗಿ ಒತ್ತಾಯಿಸಿದರು.
2012 ರ ಉತ್ತರ ಪ್ರದೇಶ ಚುನಾಣೆಯಲ್ಲಿ ತಮ್ಮ ಪಕ್ಷದಿಂದ 360 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಆದರೆ. ಒಂದೇ ಒಂದು ಸ್ಥಾನ ಗೆಲ್ಲುವಲ್ಲಿ ವಿಫಲವಾಗಿದ್ದರು. ಅಜಂಗಢದಲ್ಲಿ ಗೆಲ್ಲುವಲ್ಲಿ ವಿಫಲರಾದ ಬಳಿ ರಾಜಕೀಯದಿಂದ ಹೊರಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT