ಬುರುಡೆ ಹಿಡಿದು ದೆಹಲಿಗೆ ಆಗಮಿಸಿದ ತಮಿಳುನಾಡು ರೈತರು: ತಡೆದರೆ ಬೆತ್ತಲೆ ಪ್ರತಿಭಟನೆ ನಡೆಸುತ್ತೇವೆಂದ ತ.ನಾಡು ರೈತರು 
ದೇಶ

ತಲೆಬುರುಡೆ ಹಿಡಿದು ದೆಹಲಿಗೆ ತಮಿಳುನಾಡು ರೈತರ ಆಗಮನ: ತಡೆದರೆ ಬೆತ್ತಲೆ ಪ್ರತಿಭಟನೆ ನಡೆಸುವ ಬೆದರಿಕೆ

ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ 2 ದಿನಗಳ ಕಿಸಾನ್ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ತಲೆಬುರುಡೆಗಳನ್ನು ಹಿಡಿದು ದೆಹಲಿಗೆ ಆಗಮಿಸಿರುವ ತಮಿಳುನಾಡು ರೈತರು...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ 2 ದಿನಗಳ ಕಿಸಾನ್ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ತಲೆಬುರುಡೆಗಳನ್ನು ಹಿಡಿದು ದೆಹಲಿಗೆ ಆಗಮಿಸಿರುವ ತಮಿಳುನಾಡು ರೈತರು, ಸಂಸತ್ತಿಗೆ ಹೋಗುವುದನ್ನು ತಡೆಹಿಡಿದಿದ್ದೇ ಆದರೆ, ಬೆತ್ತಲೆಗೊಂಡು ಪ್ರತಿಭಟನೆ ನಡೆಸುವುದಾಗಿ ಶುಕ್ರವಾರ ಬೆದರಿಕೆ ಹಾಕಿದ್ದಾರೆ. 

ನ್ಯಾಷನಲ್ ಸೌತ್  ಇಂಡಿಯನ್ ರಿವರ್ ಇಂಟರ್ಲಿಂಕಿಂಗ್ ಅಗ್ರಿಕಲ್ಚರ್ಸ್ ಅಸೋಸಿಯೇಶನ್’ನ 1,200 ಸದಸ್ಯರು ಈಗಾಗಲೇ ರಾಜಧಾನಿ ದೆಹಲಿ ತಲುಪಿದ್ದಾರೆಂದು ಪಿ.ಅಯ್ಯಕನ್ನು ಅವರು ಹೇಳಿದ್ದಾರೆ. 

ಸಾವಿರಾರು ರೈತರು ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಶುಕ್ರವಾರ ಈ ರೈತರು ಸಂಸತ್ತಿಗೆ ತೆರಳುತ್ತಾರೆ. ಪ್ರತಿಭಟನೆ ವೇಳೆ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ರೈತರು ಆಗ್ರಹಿಸುತ್ತಾರೆಂದು ತಿಳಿಸಿದ್ದಾರೆ. 

ತಿರುಚಿ ಹಾಗೂ ಕರೂರಿನಲ್ಲಿಯೂ ಸಂಘಟನೆಗೆ ಸೇರಿದ ಹಲವಾರು ರೈತರಿದ್ದು, ಎಲ್ಲಾ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಅಯ್ಯಕನ್ನು ಅವರು ಕರೆ ನೀಡಿದ್ದಾರೆ. 

ರೈತರ ಸಾಲ ಮನ್ನಾ, ಬೆಲ ನಿಗದಿ, ರೈತರಿಗೆ ತಿಂಗಳಿಗೆ ರೂ.5,000 ಪಿಂಚಣಿ ನೀಡಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದಿದ್ದಾರೆ. 

ಪ್ರತಿಭಟನೆಯಲ್ಲಿ ರೈತರ ನಾಯಕರು ಹಾಗೂ ಸಂಘಟನೆಗೆ ಸೇರಿದ ಇಬ್ಬರು ಎರಡು ತಲೆಬುರುಡೆಗಳನ್ನು ಹಿಡಿದು ಪ್ರತಿಭಟನೆಯನ್ನು ಭಾಗವಹಿಸಿದ್ದಾರೆ. ಸಾಲ ಮನ್ನಾ ಮಾಡಲು ಸಾಧ್ಯವಾಗದೆ ನಮ್ಮೊಂದಿಗಿದ್ದ ಇಬ್ಬರು ರೈತರು ಆತ್ಮಹತ್ಯೆಗ ಶರಣಾಗಿದ್ದರು. ಆ ಇಬ್ಬರು ರೈತರ ತಲೆಬುರುಡೆಗಳಿವು ಎಂದು ಹೇಳಿದ್ದಾರೆ. 

ನಮಗೆ ಬೆಳೆ ಬೆಳೆಯಲು ನೀರಿಲ್ಲ. ಕಳದ 5 ವರ್ಷಗಳಿಂದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಈ ವರ್ಷ ಕೂಡ ಇದೇ ಪರಿಸ್ಥಿತಿ ಮುಂದುವರೆದಿದೆ. ನಾಳೆ ನಾವು ಸಂಸತ್ತಿಗೆ ತೆರಳುತ್ತಿದ್ದೇವೆ. ಒಂದು ವೇಳೆ ಪೊಲೀಸರು ನಮ್ಮನ್ನು ತಡೆಹಿಡಿದಿದ್ದೇ ಆದರೆ, ಬೆತ್ತಲೆಗೊಂಡು ಪ್ರತಿಭಟನೆ ನಡೆಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್