ಅರುಣಾಚಲ ಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ 
ದೇಶ

ತುಂಬು ಗರ್ಭಿಣಿಯನ್ನು ಸ್ವಂತ ಹೆಲಿಕಾಪ್ಟರ್'ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ರಾಜ್ಯಪಾಲ

ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ತಮ್ಮ ಸ್ವಂತ ಹೆಲಿಕಾಪ್ಟರ್ ನಲ್ಲಿಂದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಅರುಣಾಚಲ ಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ ಅವರು ಮಾನವೀಯತೆ ಮೆರೆದಿದ್ದಾರೆ...

ಇಟಾನಗರ: ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ತಮ್ಮ ಸ್ವಂತ ಹೆಲಿಕಾಪ್ಟರ್ ನಲ್ಲಿಂದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಅರುಣಾಚಲ ಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ ಅವರು ಮಾನವೀಯತೆ ಮೆರೆದಿದ್ದಾರೆ. 
ರಾಜ್ಯಪಾಲ ಮಿಶ್ರಾ ಅವರು, ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿದ್ದ ತುಂಬು ಗರ್ಭೀಣಿಯನ್ನು ಇವಾಂಗ್ ನಿಂದ ಇಟಾನಗರದವರೆಗೆ ಕರೆತಂದು ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. 
ರಾಜ್ಯಪಾಲರ ಹೆಲಿಕಾಪ್ಟರ್ ತೇಜ್ಪುರದಲ್ಲಿ ಇಂಧನ ತುಂಬಿಸಿಕೊಂಡಿತ್ತು. ಬಳಿಕ ತಾಂತ್ರಿಕ ದೋಷಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಜ್ಯಪಾಲರು, ವಾಯುಪಡೆ ಹೆಲಿಕಾಪ್ಟರ್'ಗೆ ಮನವಿ ಮಾಡಿಕೊಂಡು ಗರ್ಭಿಣಿ ಹಾಗೂ ಆಕೆಯ ಪತಿಯನ್ನು ಮೊದಲು ರಾಜಧಾನಿ ತಲುವಂತೆ ವ್ಯವಸ್ಥೆ ಮಾಡಿದ್ದರು. ಬಳಿಕ ಮತ್ತೊಂದು ವಿಮಾನದಲ್ಲಿ ತಮ್ಮ ಪ್ರಯಾಣ ಬೆಳೆಸಿದ್ದಾರೆ. 
ಇದಲ್ಲದೆ ಮಿಶ್ರಾ ಅವರು ರಾಜಭವನ ಹೆಲಿಪ್ಯಾಡ್'ನಿಂತ ಪ್ರಸೂತಿ ತಜ್ಞರನ್ನೊಳಗೊಂಡ ಆ್ಯಂಬುಲೆನ್ಸ್ ವಾಹನವನ್ನು ವ್ಯವಸ್ಥೆ ಮಾಡಿ ಮಹಿಳೆ ಆಸ್ಪತ್ರೆಗೆ ತಲುಪಲು ವಿಳಂಬವಾಗದಂತೆ ನೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆಗೆ ಸಿಸೇರಿಯನ್ ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. 
ತವಾಂಗ್ ಪಟ್ಟಣದಿಂದ ಇಟಾನಗರಕ್ಕೆ 200 ಕಿಮೀ ದೂರವಿದ್ದು, ಬೆಟ್ಟಗುಡ್ಡ ಹಾಗೂ ಕಣಿವೆ ಪ್ರದೇಶದ ರಸ್ತೆ ತಲುಪಲು 15 ತಾಸುಗಳು ಬೇಕಾಗುತ್ತದೆ. ಆದರೆ, ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಿದ್ದರಿಂದ ಮಹಿಳೆ ಎರಡು ಗಂಟೆಯ ಒಳಗಾಗಿ ಆಸ್ಪತ್ರೆಗೆ ತಲುಪುವುದು ಸಾಧ್ಯವಾಗಿದೆ. 
ತವಾಂಗ್ ನಲ್ಲಿ ಬಧುವಾರ ರಾಜ್ಯಪಾಲರು ಭಾಗವಿಸಿದ್ದ ಸಮಾರಂಭವೊಂದರಲ್ಲಿ ಮುಖ್ಯಮಂತ್ರಿ ಪೇಮಾ ಖಂಡು ಮತ್ತು ಸ್ಥಳೀಯ ಶಾಸಕರು ಚರ್ಚೆ ನಡೆಸಿದ್ದರು. ಈ ವೇಳೆ ಈ ವಿಚಾರ ರಾಜ್ಯಪಾಲರ ಗಮನಕ್ಕೆ ಬಂದಿತ್ತು. ಮಹಿಳೆಯೊಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು, ಮುಂದಿನ 3 ದಿನಗಳ ಕಾಲ ತವಾಂಗ್ ಹಾಗೂ ಗುವಾಹಟಿ ಮಧ್ಯೆ ಹೆಲಿಕಾಪ್ಟರ್ ಸೇವೆ ಇಲ್ಲ ಎಂದು ಶಾಸಕರು ಮಾಹಿತಿ ನೀಡಿದ್ದರು. ಈ ವೇಳೆ ರಾಜ್ಯಪಾಲರು ತಮ್ಮ ಇಬ್ಬರು ಅಧಿಕಾರಿಗಳೊಂದಿಗೆ ಮಾತನಾಡಿ, ತಮ್ಮ ಹೆಲಿಕಾಪ್ಟರ್ ನಲ್ಲಿ  ಮಹಿಳೆ ಹಾಗೂ ಆಕೆಯ ಪತಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT