ನವದೆಹಲಿ: ಕಾಂಗ್ರೆಸ್ ನಿಷ್ಠಾವಂತ ನಾಯಯಕಿ ಹಾಗೂ ಮಾಜಿ ಸಂಸದೆ ಪ್ರಿಯಾ ದತ್ ಅವರನ್ನು ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲಾಗಿದೆ,
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾ ದತ್ ಎಐಸಿಸಿ ಕಾರ್ಯದರ್ಶಿಯ ಎಲ್ಲಾ ಕರ್ತವ್ಯಗಳಿಂದ ನನ್ನನ್ನು ಬಿಡುಗಡೆ ಮಾಡಲಾಗಿದೆ, ಈ ಸಂಬಂಧ ನನಗೆ ಲೆಟರ್ ಸಿಕ್ಕಿದೆ, ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ, ಇಷ್ಟು ವರ್ಷ ಪಕ್ಷದಲ್ಲಿ ದುಡಿಯಲು ಅವಕಾಶ ನೀಡಿದ್ದ ರಾಹುಲ್ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ, ಎಐಸಿಸಿ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಹಾಗೂ ನನಗೆ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.
ಪ್ರಿಯಾ ದತ್ ಕಾಂಗ್ರೆಸ್ ತೊರೆಯುವರೇ ಎಂಬ ಪ್ರಶ್ನೆ ಕೇಳಿ ಬಂದಿದೆ,.ಆದರೆ ಈ ಸಂಬಂಧ ಪ್ರಿಯಾ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ,
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ವಿರುದ್ಧವಾಗಿ ಪ್ರಿಯಾ ಟ್ವೀಟ್ ಮಾಡಿದ್ದರು, ಕಾಂಗ್ರೆಸ್ ಅನ್ನು ಕಾಂಗ್ರೆಸ್ ನಾಶ ಮಾಡುತ್ತಿದೆ, ರೋಗಗ್ರಸ್ಥ ಕಾಂಗ್ರೆಸ್ ಅನ್ನು ಆರೋಗ್ಯಯುತವಾಗಿಸಲು ಚಿಕಿತ್ಸೆ ನೀಡಬೇಕು ಎಂದು ಟ್ವೀಟ್ ಮಾಡಿದ್ದರು.