ಹಿಂದೂ ಸ್ವಾಮೀಜಿಗಳು 
ದೇಶ

ರಾಮ ಮಂದಿರ ನಿರ್ಮಿಸುವಂತೆ ಒತ್ತಾಯ : ಹಿಂದೂ ಸ್ವಾಮೀಜಿಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ !

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವಂತೆ ಒತ್ತಾಯಿಸಿ ಹಿಂದೂ ಸ್ವಾಮೀಜಿಗಳ ಗುಂಪೊಂದು ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದೆ.

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವಂತೆ ಒತ್ತಾಯಿಸಿ  ಹಿಂದೂ ಸ್ವಾಮೀಜಿಗಳ ಗುಂಪೊಂದು  ಇಂದಿನಿಂದ  ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಪಸ್ವಿ ಚಾವ್ನಿ ದೇವಾಲಯದ ಮಹಂತ ಸ್ವಾಮಿ ಪರಮಹಂಸ ದಾಸ್,  ರಾಮ ಮಂದಿರ ನಿರ್ಮಾಣ ಸಂಬಂಧ ಬಿಜೆಪಿ ಸರ್ಕಾರ ಕಾನೂನು ರೂಪಿಸಬೇಕು. ಆದಷ್ಟು ಬೇಗ ರಾಮಮಂದಿರ ನಿರ್ಮಾಣ ಆಗಬೇಕು. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಾತನಾಡಿ ಮಂದಿರ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ   ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿರುವುದಾಗಿ ತಿಳಿಸಿದರು.

ಉಪವಾಸ  ಸತ್ಯಾಗ್ರಹ ಹಿನ್ನೆಲೆಯಲ್ಲಿ  ತಪಸ್ವಿ ಚಾವ್ನಿ ದೇವಾಲಯದಲ್ಲಿ ಸ್ವಾಮೀಜಿಗಳು ಶೈಲಾ ಪೂಜೆ ನೆರವೇರಿಸಿದ್ದಾರೆ.

ಇದಕ್ಕೂ ಮುನ್ನ ರಾಮ ಮಂದಿರ ಸ್ವಾಮೀಜಿಗಳ ಮುಖ್ಯಸ್ಥ ಅಚಾರ್ಯ ಸತ್ಯೇಂದ್ರ ದಾಸ್,  ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ವಿಫಲತೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು.

ಈ ಮಧ್ಯೆ ಅಯೋಧ್ಯ ವಿಚಾರ ಆದಷ್ಟು ಬೇಗ ಇತ್ಯರ್ಥವಾಗಲಿದೆ. ಈ ವಿವಾದದ ಇತ್ಯರ್ಥಕ್ಕಾಗಿ ದೇಶದ ಜನತೆಯೂ ಕಾಯುತ್ತಿದ್ದಾರೆ. ಸುಪ್ರೀಂಕೋರ್ಟ್  ರಾಮ ಮಂದಿರ ನಿರ್ಮಾಣ ಪರ ತೀರ್ಪು ನೀಡುವ ವಿಶ್ವಾಸ ವಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 29 ರಿಂದ ಸುಪ್ರೀಂಕೋರ್ಟ್ ನಲ್ಲಿ  ರಾಮ ಜನ್ಮ ಭೂಮಿ- ಬಾಬ್ರಿ ಮಸೀದಿಗೆ ಸಂಬಂಧಿಸಿದ ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT