ಹಿಂದೂ ಸ್ವಾಮೀಜಿಗಳು 
ದೇಶ

ರಾಮ ಮಂದಿರ ನಿರ್ಮಿಸುವಂತೆ ಒತ್ತಾಯ : ಹಿಂದೂ ಸ್ವಾಮೀಜಿಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ !

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವಂತೆ ಒತ್ತಾಯಿಸಿ ಹಿಂದೂ ಸ್ವಾಮೀಜಿಗಳ ಗುಂಪೊಂದು ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದೆ.

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವಂತೆ ಒತ್ತಾಯಿಸಿ  ಹಿಂದೂ ಸ್ವಾಮೀಜಿಗಳ ಗುಂಪೊಂದು  ಇಂದಿನಿಂದ  ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಪಸ್ವಿ ಚಾವ್ನಿ ದೇವಾಲಯದ ಮಹಂತ ಸ್ವಾಮಿ ಪರಮಹಂಸ ದಾಸ್,  ರಾಮ ಮಂದಿರ ನಿರ್ಮಾಣ ಸಂಬಂಧ ಬಿಜೆಪಿ ಸರ್ಕಾರ ಕಾನೂನು ರೂಪಿಸಬೇಕು. ಆದಷ್ಟು ಬೇಗ ರಾಮಮಂದಿರ ನಿರ್ಮಾಣ ಆಗಬೇಕು. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಾತನಾಡಿ ಮಂದಿರ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ   ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿರುವುದಾಗಿ ತಿಳಿಸಿದರು.

ಉಪವಾಸ  ಸತ್ಯಾಗ್ರಹ ಹಿನ್ನೆಲೆಯಲ್ಲಿ  ತಪಸ್ವಿ ಚಾವ್ನಿ ದೇವಾಲಯದಲ್ಲಿ ಸ್ವಾಮೀಜಿಗಳು ಶೈಲಾ ಪೂಜೆ ನೆರವೇರಿಸಿದ್ದಾರೆ.

ಇದಕ್ಕೂ ಮುನ್ನ ರಾಮ ಮಂದಿರ ಸ್ವಾಮೀಜಿಗಳ ಮುಖ್ಯಸ್ಥ ಅಚಾರ್ಯ ಸತ್ಯೇಂದ್ರ ದಾಸ್,  ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ವಿಫಲತೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು.

ಈ ಮಧ್ಯೆ ಅಯೋಧ್ಯ ವಿಚಾರ ಆದಷ್ಟು ಬೇಗ ಇತ್ಯರ್ಥವಾಗಲಿದೆ. ಈ ವಿವಾದದ ಇತ್ಯರ್ಥಕ್ಕಾಗಿ ದೇಶದ ಜನತೆಯೂ ಕಾಯುತ್ತಿದ್ದಾರೆ. ಸುಪ್ರೀಂಕೋರ್ಟ್  ರಾಮ ಮಂದಿರ ನಿರ್ಮಾಣ ಪರ ತೀರ್ಪು ನೀಡುವ ವಿಶ್ವಾಸ ವಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 29 ರಿಂದ ಸುಪ್ರೀಂಕೋರ್ಟ್ ನಲ್ಲಿ  ರಾಮ ಜನ್ಮ ಭೂಮಿ- ಬಾಬ್ರಿ ಮಸೀದಿಗೆ ಸಂಬಂಧಿಸಿದ ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT