ಸಂಗ್ರಹ ಚಿತ್ರ 
ದೇಶ

ಆಧಾರ್ ಇಕೆವೈಸಿ ಹೇಗೆ ನಿಲ್ಲಿಸುವಿರಿ? 15 ದಿನಗಳಲ್ಲಿ ತಿಳಿಸಿ, ಟೆಲಿಕಾಂ ಸಂಸ್ಥೆಗಳಿಗೆ ಯುಐಡಿಎಐ

ಸುಪ್ರೀಂ ಕೋರ್ಟ್ ಆಧಾರ್ ಕುರಿತು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಯುಐಡಿಎಐ ದೇಶದ ಟೆಲಿಕಾಂ ಸಂಸ್ಥೆಗಳು ಪಡೆಯುವ ಆಧಾರ್ ದಾಖಲಾತಿ ವಿವರವನ್ನು ಯಾವ ಬಗೆಯಲ್ಲಿ ನಿಲ್ಲಿಸುತ್ತೀರಿ?

ನವದೆಹಲಿ: ಸುಪ್ರೀಂ ಕೋರ್ಟ್ ಆಧಾರ್ ಕುರಿತು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಯುಐಡಿಎಐ ದೇಶದ ಟೆಲಿಕಾಂ ಸಂಸ್ಥೆಗಳು ಪಡೆಯುವ ಆಧಾರ್ ದಾಖಲಾತಿ ವಿವರವನ್ನು ಯಾವ ಬಗೆಯಲ್ಲಿ ನಿಲ್ಲಿಸುತ್ತೀರಿ ಎನ್ನುವುದನ್ನು ಮುಂಬರುವ ಹದಿನೈದು ದಿನಗಳಲ್ಲಿ ತಿಳಿಸಬೇಕೆಂದು  ಕೇಳಿದೆ.
ಭಾರ್ತಿ ಏರ್ ಟೆಲ್, ರಿಲಯನ್ಸ್ ಜಿಯೋ, ಐಡಿಯಾ,  ವೊಡಾಫೋನ್ ಸೇರಿದಂತೆ ದೇಶದ ಟೆಲಿಕಾಂ ಸೇವಾ ಪೂರೈಕೆದಾರರಿಗೆ (ಟಿಎಸ್ಪಿ) ಯುಐಡಿಎಐ  ಸುತ್ತೋಲೆ ಹೊರಡಿಸಿದೆ.
"26 ಸೆಪ್ಟಂಬರ್ 2018.ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅನುಸಾರವಾಗಿ ಎಲ್ಲಾ ಟಿಎಸ್ಪಿಗಳನ್ನು ತಕ್ಷಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.ಎಲ್ಲಾ ಟಿಎಸ್ಪಿಗಳು ಆಧಾರ್ ಆಧಾರಿತ ದೃಢೀಕರಣ ವ್ಯವಸ್ಥೆಗಳ ಬಳಕೆಯನ್ನು ನಿಲ್ಲಿಸಲು ಯಾವ ಬಗೆಯ ಯೋಜನೆ ರೂಪಿಸಿಕೊಳ್ಳುತ್ತದೆ ಎನ್ನುವುದನ್ನು 15 ನೇ ಅಕ್ಟೋಬರ್, 2018 ರೊಳಗೆ ತಿಳಿಸಬೇಕು ಎಂದು ಇದರಲ್ಲಿ ತಿಳಿಸಲಾಗಿದೆ." ಪಿಟಿಐ ವರದಿ ಮಾಡಿದೆ.
ಕಳೆದ ವಾರ ಸುಪ್ರೀಂ ಕೋರ್ಟ್ ಆಧಾರ್ ಕಾಯ್ದೆಯ ಸೆಕ್ಷನ್ 57 ಅನ್ನು ರದ್ದುಗೊಳಿಸಿದೆ.ಖಾಸಗಿ ಕಂಪೆನಿಗಳು 12-ಅಂಕಿಯ ಬಯೋಮೆಟ್ರಿಕ್ ಐಡಿ ಆಧಾರಿತ ಇಕೆವೈಸಿ ಅನ್ನು ಬಳಸಲು ಅವಕಾಶವಿಲ್ಲ ಎಂದು ಅದು ಸ್ಪಷ್ಟವಾಗಿ ತಿಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

'ಬಹುಶಃ ರಾಹುಲ್ ಗಾಂಧಿಗೆ ಈಗ ತೃಪ್ತಿಯಾಗಿರಬಹುದು': ED ದಾಳಿ ಕುರಿತು ಮಾಜಿ ಸಿಎಂ ಪಿಣರಾಯಿ ವಿಜಯನ್ ಕಿಡಿ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

SCROLL FOR NEXT