ಸಂಗ್ರಹ ಚಿತ್ರ 
ದೇಶ

ಆಧಾರ್ ಇಕೆವೈಸಿ ಹೇಗೆ ನಿಲ್ಲಿಸುವಿರಿ? 15 ದಿನಗಳಲ್ಲಿ ತಿಳಿಸಿ, ಟೆಲಿಕಾಂ ಸಂಸ್ಥೆಗಳಿಗೆ ಯುಐಡಿಎಐ

ಸುಪ್ರೀಂ ಕೋರ್ಟ್ ಆಧಾರ್ ಕುರಿತು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಯುಐಡಿಎಐ ದೇಶದ ಟೆಲಿಕಾಂ ಸಂಸ್ಥೆಗಳು ಪಡೆಯುವ ಆಧಾರ್ ದಾಖಲಾತಿ ವಿವರವನ್ನು ಯಾವ ಬಗೆಯಲ್ಲಿ ನಿಲ್ಲಿಸುತ್ತೀರಿ?

ನವದೆಹಲಿ: ಸುಪ್ರೀಂ ಕೋರ್ಟ್ ಆಧಾರ್ ಕುರಿತು ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಯುಐಡಿಎಐ ದೇಶದ ಟೆಲಿಕಾಂ ಸಂಸ್ಥೆಗಳು ಪಡೆಯುವ ಆಧಾರ್ ದಾಖಲಾತಿ ವಿವರವನ್ನು ಯಾವ ಬಗೆಯಲ್ಲಿ ನಿಲ್ಲಿಸುತ್ತೀರಿ ಎನ್ನುವುದನ್ನು ಮುಂಬರುವ ಹದಿನೈದು ದಿನಗಳಲ್ಲಿ ತಿಳಿಸಬೇಕೆಂದು  ಕೇಳಿದೆ.
ಭಾರ್ತಿ ಏರ್ ಟೆಲ್, ರಿಲಯನ್ಸ್ ಜಿಯೋ, ಐಡಿಯಾ,  ವೊಡಾಫೋನ್ ಸೇರಿದಂತೆ ದೇಶದ ಟೆಲಿಕಾಂ ಸೇವಾ ಪೂರೈಕೆದಾರರಿಗೆ (ಟಿಎಸ್ಪಿ) ಯುಐಡಿಎಐ  ಸುತ್ತೋಲೆ ಹೊರಡಿಸಿದೆ.
"26 ಸೆಪ್ಟಂಬರ್ 2018.ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಅನುಸಾರವಾಗಿ ಎಲ್ಲಾ ಟಿಎಸ್ಪಿಗಳನ್ನು ತಕ್ಷಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.ಎಲ್ಲಾ ಟಿಎಸ್ಪಿಗಳು ಆಧಾರ್ ಆಧಾರಿತ ದೃಢೀಕರಣ ವ್ಯವಸ್ಥೆಗಳ ಬಳಕೆಯನ್ನು ನಿಲ್ಲಿಸಲು ಯಾವ ಬಗೆಯ ಯೋಜನೆ ರೂಪಿಸಿಕೊಳ್ಳುತ್ತದೆ ಎನ್ನುವುದನ್ನು 15 ನೇ ಅಕ್ಟೋಬರ್, 2018 ರೊಳಗೆ ತಿಳಿಸಬೇಕು ಎಂದು ಇದರಲ್ಲಿ ತಿಳಿಸಲಾಗಿದೆ." ಪಿಟಿಐ ವರದಿ ಮಾಡಿದೆ.
ಕಳೆದ ವಾರ ಸುಪ್ರೀಂ ಕೋರ್ಟ್ ಆಧಾರ್ ಕಾಯ್ದೆಯ ಸೆಕ್ಷನ್ 57 ಅನ್ನು ರದ್ದುಗೊಳಿಸಿದೆ.ಖಾಸಗಿ ಕಂಪೆನಿಗಳು 12-ಅಂಕಿಯ ಬಯೋಮೆಟ್ರಿಕ್ ಐಡಿ ಆಧಾರಿತ ಇಕೆವೈಸಿ ಅನ್ನು ಬಳಸಲು ಅವಕಾಶವಿಲ್ಲ ಎಂದು ಅದು ಸ್ಪಷ್ಟವಾಗಿ ತಿಳಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT