ಅಣ್ಣಾ ಹಜಾರೆ 
ದೇಶ

ಉಪವಾಸ ಸತ್ಯಾಗ್ರಹ ಮುಂದೂಡಿದ ಅಣ್ಣಾ ಹಜಾರೆ

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಇಂದಿನಿಂದ (ಅಕ್ಟೋಬರ್ 2) ನಡೆಸಲುದ್ದೇಶಿಸಿದ್ದ ಉಪವಾಸ ಸತ್ಯಾಗ್ರಹವನ್ನು ಮುಂದೂಡಿದ್ದಾರೆ.

ರಾಲೆಗಣ್ ಸಿದ್ದಿ(ಮಹಾರಾಷ್ಟ್ರ): ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಇಂದಿನಿಂದ (ಅಕ್ಟೋಬರ್ 2) ನಡೆಸಲುದ್ದೇಶಿಸಿದ್ದ ಉಪವಾಸ ಸತ್ಯಾಗ್ರಹವನ್ನು ಮುಂದೂಡಿದ್ದಾರೆ.
ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಅವರೊಡನೆ ಮಾತುಕತೆ ನಡೆಸಿದ ಬಳಿಕ ಅಣ್ಣಾ ಹಜಾರೆ ತನ್ನ ನಿಯೋಜಿತ ಉಪವಾಸ ಸತ್ಯಾಗ್ರಹ ಮುಂದೂಡಿರುವುದಾಗಿ ತಿಳಿಸಿದರು.
ಇದಕ್ಕೂ ಮುನ್ನ ಈ ವರ್ಷ ಜುಲೈ ನಲ್ಲಿ ಅಣ್ಣಾ ಹಜಾರೆ ತಾವು ಅಕ್ಟೋಬರ್ 2ರಿಂದ ಉಪವಾಸ ಸ್ತ್ಯಾಗ್ರಹ ಹೂಡುವುದಾಗಿ ಘೋಷಿಸಿದ್ದರು. ಕೇಂದ್ರ ಸರ್ಕಾರ ಲೋಕಪಾಲ್ ನೇಮಕ ವಿಳಂಬ ಮಾಡುತ್ತಿದೆ, ಲೋಕಪಾಲ್ ಕಾಯ್ದೆ ಜಾರಿಗೆ ಸಮ್ಮತಿಸುತ್ತಿಲ್ಲ  ಹೀಗಾಗಿ ಇದನ್ನು ಖಂಡಿಸಿ ತಾನು ಮಹಾರಾಷ್ಟ್ರದ ರಾಲೆಗಣ್ ಸಿದ್ದಿಯಲ್ಲಿ ಉಪವಾಸ ಸತ್ಯಾಗ್ರಹ ಕುಳಿತು ಹೋರಾಟ ಪ್ರಾರಂಭಿಸುತ್ತೇನೆ ಎಂದು ಘೋಷಿಸಿದ್ದರು.
ಇದಾಗಲೇ ಸಂಸತ್ತಿನಲ್ಲಿ ಅನುಮೋದನೆ ಪಡೆದು 2014ರ ಜನವರಿಯಲ್ಲಿ ರಾಷ್ಟ್ರಪತಿಗಳಿಂದ ಅಂಕಿತಗೊಂಡ ಲೋಕಪಾಲ್ ಮಸೂದೆ ಜಾರಿಯ ಕುರಿತಂತೆ ಕೇಂದ್ರ ಸರ್ಕಾರ ಯಾವ ಸ್ಪಷ್ಟ ನಿಲುವು ತಳೆಯುತ್ತಿಲ್ಲ  ಎಂದು ಅವರು ಆರೋಪಿಸಿದ್ದಾರೆ.
"ಭ್ರಷ್ಟಾಚಾರವನ್ನು ನಿವಾರಿಸಲು ಈ ಸರ್ಕಾರಕ್ಕೆ ಇಚ್ಚಾಶಕ್ತಿಯ ಕೊರತೆ ಇದೆ.ಇದಕ್ಕೆ ಬಹಳಷ್ಟು ಕಾರಣಗಳನ್ನು ಹೇಳುವ ಮೂಲಕ ಲೋಕಪಾಲ್ ಜಾರಿಯನ್ನು ವಿಳಂಬ ಮಾಡುತ್ತಿದೆ"
ಲೋಕಪಾಲ ಚಳವಳಿಯ  ಮುಂಚೂಣಿಯಲ್ಲಿದ್ದ ಅಣ್ಣಾ ಹಜಾರೆ  2011 ರಲ್ಲಿ 12 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಲೋಕಪಾಲ್ ಪರವಾಗಿ ಅಣ್ಣಾ ಹೋರಾಟ ರಾಷ್ಟ್ರಾದ್ಯಂತ ಅಪಾರ ಮನ್ನಣೆ ಗಳಿಸಿಕೊಂಡಿತ್ತು. ಇದರ ಫಲವಾಗಿ ಯುಪಿಎ  ಸರ್ಕಾರ ಲೋಕಪಾಲ ಮಸೂದೆ ಅಂಗೀಕರಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT