ಯೋಗಿ ಆದಿತ್ಯನಾಥ್ 
ದೇಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಸ್ಯದ ವಸ್ತುವಾಗಿದೆ: ಸಿಎಂ ಯೋಗಿ ಮುಜುಗರ ಉಂಟುಮಾಡಿದ ಸಂಪುಟ ಸಹೋದ್ಯೋಗಿ!

ಉತ್ತರ ಪ್ರದೇಶದಲ್ಲಿ ಆಪಲ್ ಸಂಸ್ಥೆಯ ಉದ್ಯೋಗಿಯ ಮೇಲೆ ಪೊಲೀಸ್ ಪೇದೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ತೀವ್ರ ಅಸಮಾಧಾನಗೊಂಡಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ಆಪಲ್ ಸಂಸ್ಥೆಯ ಉದ್ಯೋಗಿಯ ಮೇಲೆ ಪೊಲೀಸ್ ಪೇದೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ತೀವ್ರ ಅಸಮಾಧಾನಗೊಂಡಿದ್ದಾರೆ. 
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ಅಸಮಾಧಾನಗೊಂಡಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂದರೆ ಹಾಸ್ಯದ ವಸ್ತುವಾಗಿಬಿಟ್ಟಿದೆ, ಯೋಗಿ ಆದಿತ್ಯನಾಥ್ ಅವರ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲಗೊಂಡಿದೆ ಎಂದು ಹಿಂದುಳಿದ  ವರ್ಗ, ದಿವ್ಯಾಂಗ ಕಲ್ಯಾಣ ಇಲಾಖೆ ಸಚಿವ ಓಂ ಪ್ರಕಾಶ್ ರಾಜ್ಭರ್  ಹೇಳಿದ್ದಾರೆ. 
ಆಪಲ್ ಉದ್ಯೋಗಿಯಾಗಿದ್ದ ವಿವೇಕ್ ತಿವಾರಿ ಹತ್ಯೆ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂದು ಓಂ ಪ್ರಕಾಶ್ ರಾಜ್ಭರ್ ಹೇಳಿದ್ದಾರೆ.  ಬಿಜೆಪಿ ಮಿತ್ರ ಪಕ್ಷವಾಗಿರುವ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥರಾಗಿರುವ ರಾಜ್ಭರ್ ವಿವೇಕ್ ತಿವಾರಿ ಪ್ರಕರಣದಲ್ಲಿ ಪೊಲೀಸರು ನಡೆದಿರುವ ತಪ್ಪನ್ನು ಮುಚ್ಚಿಹಾಕುವುದಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಎನ್ ಕೌಂಟರ್ ಹೆಸರಿನಲ್ಲಿ ಸಾಮಾನ್ಯ ನಾಗರಿಕರೊಬ್ಬರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಪೊಲೀಸರು ಹಣ ಪಡೆದು ಜನರನ್ನು ಹತ್ಯೆ ಮಾಡುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ಹಾಸ್ಯದ ವಿಷಯವಾಗಿಬಿತ್ಟಿದೆ ಯೋಗಿ ಆದಿತ್ಯನಾಥ್ ಅವರು ಅಪರಾಧವನ್ನು ತಡೆಗಟ್ಟುವಲ್ಲಿ ಯಶಸ್ವಿಯೂ ಆಗಿಲ್ಲ. ಜನತೆಗೆ ತಾವು ಸುರಕ್ಷಿತರಾಗಿದ್ದೇವೆ ಎಂಬ ನೆಮ್ಮದಿಯೂ ಇಲ್ಲ ಎಂದು ರಾಜ್ಭರ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT