ರಂಜನ್ ಗೊಗೋಯ್ 
ದೇಶ

ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ: ಗೊಗೋಯ್

ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ...

ನವದೆಹಲಿ: ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ನ 46ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವತಚನ ಸ್ವೀಕರಿಸಿ ಮಾತನಾಡಿದ  ಅವರು ತ್ವರಿತಗತಿಯ ಪ್ರಕರಣಗಳ ವಿಚಾರಣೆಗೆ ಮೊದಲ ಆದ್ಯತೆ ನೀಡಲಾಗುವುದು, ಕೆಲವು ಮಾನದಂಡ ನಿಗಧಿ ಪಡಿಸುವವರೆಗೆ ಈ ವಿಧಾನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ,
ನಿಗದಿ ಮಾನದಂಡಗಳ ಬಗ್ಗೆ ನಾವು ಕೆಲಸ ಮಾಡುತ್ತಿದ್ದು, ಅದು ಹೇಗೆ ನಡೆಯುತ್ತದೆ ಎಂಬುದನ್ನು ನೋಡುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನಾಳೆಯೇ ಕೆಲವರು ಗಲ್ಲು ಶಿಕ್ಷೆಗೆ ಒಳಗಾಗುತ್ತಿದ್ದಾರೆ ಎಂದು ತಿಳಿದು ಬಂದರೆ ಅಂತಹ ಕೇಸ್ ಗಳ ಬಗ್ಗೆ ಗಮನ ಹರಿಸುತ್ತೇವೆ ಎಂದು ಹೇಳಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ  63 ವರ್ಷದ ರಂಜನ್ ಗೊಗೋಯ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದರು, ಜಸ್ಟೀಸ್ ಗಗೋಯ್ ಅವರ ಅಧಿಕಾರವಧಿ13 ತಿಂಗಳಿದೆ. ಅಂದರೆ ನವೆಂಬರ್ 17 2019ಕ್ಕೆ ಅವರ ಸೇವಾವಧಿ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT